Sun,May19,2024
ಕನ್ನಡ / English

ಮರ್ಯಾದಾ ಹತ್ಯೆ: ಪ್ರೇಮಿಗಳನ್ನ ಒಂದು ಮಾಡ್ತೀವಿ ಎಂದು ಕರೆದು ಹತ್ಯೆ | JANATA NEWS

18 Oct 2022
3489

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಭೀಕರ ಮರ್ಯಾದಾ ಹತ್ಯೆ ಬೆಳಕಿಗೆ ಬಂದಿದೆ. ಯುವತಿಯ ತಂದೆ ಹಾಗೂ ಮಾವಂದಿರು ಪ್ರೇಮಿಗಳಿಬ್ಬರನ್ನು ಕೊಲೆಗೈದು ಕೃಷ್ಣಾ ನದಿಗೆ ಎಸೆದಿದ್ದಾರೆ ಎನ್ನಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಇಬ್ಬರ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಗ್ರಾಮದ ವಿಶ್ವನಾಥ್ ನೆಲಗಿ(24) ಹಾಗೂ ರಾಜೇಶ್ವರಿ(18) ಹತ್ಯೆಯಾದ ಪ್ರೇಮಿಗಳು. ಸುಮಾರು 4-5 ವರ್ಷಗಳಿಂದ ವಿಶ್ವನಾಥ್ ಹಾಗೂ ರಾಜೇಶ್ವರಿ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.

ಈ ವಿಚಾರ ತಿಳಿದ ರಾಜೇಶ್ವರಿ ಪೋಷಕರು, ಅಪ್ರಾಪ್ತ ಮಗಳ ಪ್ರೀತಿಗೆ ಅಡ್ಡಿಪಡಿಸಿ ಬುದ್ಧಿ ಮಾತು ಹೇಳಿದ್ದರು. ವಿಶ್ವನಾಥ್‌ನ ಮನೆಯವರು ಆತನನ್ನು ಕೂಲಿ ಕೆಲಸಕ್ಕೆಂದು ಕೇರಳದ ಕಾಸರಗೋಡಿಗೆ ಕಳುಹಿಸಿದ್ದರು.

ಆದರೆ ರಾಜೇಶ್ವರಿಯ ತಂದೆ ಪರಸಪ್ಪ ಕರಡಿ ಇಬ್ಬರನ್ನೂ ಒಂದು ಮಾಡಿಸುವುದಾಗಿ ನಂಬಿಸಿ, ವಿಶ್ವನಾಥ್‌ನನ್ನು ಊರಿಗೆ ಬರುವಂತೆ ಹೇಳಿದ್ದಾರೆ. ನರಗುಂದ ಬಳಿ ಇದ್ದ ವಿಶ್ವನಾಥನನ್ನು ನಂಬಿಸಿ ರಾಜೇಶ್ವರಿ, ನಿನ್ನನ್ನು ಒಂದು ಮಾಡೋದಾಗಿ ಬೇವಿನಮಟ್ಟಿ ಗ್ರಾಮದಿಂದ ಕರೆದೊಯ್ದಿದ್ದರಂತೆ. ಇತ್ತ ಬಾಲಕಿಯನ್ನು ಕರೆತಂದಿದ್ದ ಆರೋಪಿಗಳು ರಾಜೇಶ್ವರಿ ಕತ್ತನ್ನು ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದರಂತೆ. ಇತ್ತ ವಿಶ್ವನಾಥನ ಮರ್ಮಾಂಗ ಹಾಗೂ ಎದೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದರಂತೆ.

ಅಲ್ಲಿಂದ ಇಬ್ಬರ ಮೃತ ದೇಹಗಳನ್ನು ಕ್ರೂಸರ್ ವಾಹನದಲ್ಲಿ ಕೊಂಡೊಯ್ದಿದ್ದಾರೆ. ಶವಗಳನ್ನು ಹುನಗುಂದ ಎನ್‌ಹೆಚ್ 50ಯ ಕೃಷ್ಣಾ ನದಿ ಬ್ರಿಡ್ಜ್ ಮೇಲೆ ಕೊಂಡೊಯ್ದು, ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಶವಗಳ ಮೇಲಿನ ಬಟ್ಟೆ ಬಿಚ್ಚಿ, ಹರಿಯುತ್ತಿದ್ದ ಕೃಷ್ಣಾ ನದಿಗೆ ಎಸೆದಿದ್ದಾರೆ. ನಂತರ ಅವರಿಬ್ಬರ ಬಟ್ಟೆಗಳನ್ನು ಸಂಗಮ ಕ್ರಾಸ್ ಬಳಿ ತಂದು ಸುಟ್ಟು ಹಾಕಿದ್ದಾರೆ.

ವಿಚಾರಣೆಗೆ ಸಂದರ್ಭದಲ್ಲಿ ಅನುಮಾನಗೊಂಡ ಪೊಲೀಸರು, ಶಂಕೆಯ ಮೇರೆಗೆ ಅಕ್ಟೋಬರ್ 15 ರಂದು ಯುವತಿಯ ಸಹೋದರ ರವಿ ಹುಲ್ಲಣ್ಣವರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ಯುವತಿ ತಂದೆ ಪರಸಪ್ಪ ಕರಡಿ ಕುಮ್ಮಕ್ಕಿನಿಂದಲೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ. ಪ್ರಕರಣದ ಸಂಬಂಧ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು, ರಾಜೇಶ್ವರಿ ಕರಡಿ (17) ವಿಶ್ವನಾಥ ನೆಲಗಿ (22) ಕೊಲೆಯಾದ ಪ್ರೇಮಿಗಳು. ಪ್ರಕರಣದಲ್ಲಿ ರಾಜೇಶ್ವರಿ ಅಣ್ಣ ರವಿ ಹುಲ್ಲಣ್ಣವರ (19), ಮಾವಂದಿರರಾದ ಹನುಮಂತ ಮಲ್ನಾಡದ (22), ಬೀರಪ್ಪ ದಳವಾಯಿ (18) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Honor killing: Killing of lovers by calling them

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...