Sat,May18,2024
ಕನ್ನಡ / English

ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್​ ಆರೋಪದ ಬಗ್ಗೆ ತನಿಖೆ ನಡೆಸಿ: ಕಾಂಗ್ರೆಸ್​ಗೆ ಕುಮಾರಸ್ವಾಮಿ ಸವಾಲು | JANATA NEWS

12 Jun 2023
1841

ರಾಮನಗರ : ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ ಬಗ್ಗೆ ಕಾಂಗ್ರೆಸ್​ ನಾಯಕರು ಸಾಬೀತು ಮಾಡಿದ್ದಾರಾ? ಲೋಕಾಯುಕ್ತಕ್ಕೆ ದೂರು ನೀಡಿದ್ದರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದ್ರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ ಎಂದರು.

ಲೋಕಸಭಾ ಚುನಾವಣಾ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ಮಾಡಿದ್ದೇನೆ. ಗೆದ್ದವರು, ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದು ಹೇಳಿದರು.

ಸಂಸದ ಡಿ.ಕೆ. ಸುರೇಶ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ ಅವರು, “ನನ್ನ ವಿಚಾರ ಬಿಡಿ, ರಾಮನಗರದ ಹಾಲಿ ಸಂಸದರ ವಿಚಾರವನ್ನೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂಥವರೇ ಚುನಾವಣೆ ಬೇಡ ಎಂದು ಹೇಳುತ್ತಿರುವಾಗ ನಮ್ಮದು ಯಾವ ಲೆಕ್ಕ ಎಂದು ಡಿ.ಕೆ. ಸುರೇಶ್ ಹೆಸರೇಳದೆ ವ್ಯಂಗ್ಯವಾಡಿದರು.

ಈಗ ಕಾಂಗ್ರೆಸ್ ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ದರೇ? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು? ಎಂದು ಅವರು ಪ್ರಶ್ನಿಸಿದರು.

ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತೇವೆ ಅಂತಿದ್ದಾರೆ. ಆದರೆ ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಮೊದಲು ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೇವಿ ಅಂದರು. ಈಗ ಮಾಲೀಕರು ಬಾಡಿಗೆದಾರರು ಅಗ್ರಿಮೆಂಟ್ ಕೊಡ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡ್ದಾಗ ನನಗೂ ಫ್ರೀ, ನಿನಗೂ ಫ್ರೀ ಅಂದ್ರಿ.! ಈಗ ಅದನ್ನು ಯಾವ ರೀತಿ ನಿಭಾಯಿಸುತ್ತಾರೆ ನೋಡಬೇಕು ಎಂದು ಹೇಳಿದರು.

RELATED TOPICS:
English summary :Investigate 40 percent allegation on BJP govt: Kumaraswamy challenges Congress

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...