Sun,May19,2024
ಕನ್ನಡ / English

ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ | JANATA NEWS

22 Jun 2023
1444

ದಾವಣಗೆರೆ : ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುವುದಾಗಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೇಂದ್ರದವರು ಅಕ್ಕಿ ಕೊಡುವುದಾಗಿ ಹೇಳಿರಲಿಲ್ಲ. ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಜೊತೆಗೆ ರಾಜ್ಯ ಸರ್ಕಾರ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಬೇಕು ಎಂದು ಒತ್ತಾಯಿಸಿ ಬಜೆಟ್ ಅಧಿವೇಶನ ಪ್ರಾರಂಭದಿಂದ ಮುಗಿಯುವರೆಗೂ ವಿಧಾನ ಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ತಾವೇ ಧರಣಿ, ಸತ್ಯಾಗ್ರಹ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕಾಂಗ್ರೆಸ್ ತನ್ನ ಸುಳ್ಳು ಭರವಸೆಯಿಂದ ಇಷ್ಟು ಸೀಟು ಗೆದ್ದಿದೆ ಎಂದು ತಿಳಿಸಿದರು. ಭರವಸೆ ಈಡೇರಿಸಲು ಯೋಗ್ಯತೆ ಇರದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೆ ತರದಿದ್ದರೆ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತೇವೆ. ಇದರಲ್ಲಿ ಬಿಜೆಪಿ ರಾಜ್ಯ ನಾಯಕರು ಭಾಗವಹಿಸುತ್ತಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ನಂತರ ಪ್ರತಿಭಟನೆ ನಡೆಸಲಾಗುವುದು. ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.

ರಾಜ್ಯಾದ್ಯಂತ 7 ತಂಡಗಳ ಪ್ರವಾಸ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮುಗಿಸಿ ಇಂದು ದಾವಣಗೆರೆ ಜಿಲ್ಲೆಗೆ ಬಂದಿದ್ದೇನೆ. ಕಾಂಗ್ರೆಸ್ ಸರ್ಕಾರ ಮನೆ‌ ಮನೆಗೆ ಹೋಗಿ 5 ಗ್ಯಾರಂಟಿ ಪತ್ರ ಕೊಟ್ಟು ಬಂದಿದ್ದಾರೆ.

ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿ ಕೊಟ್ಟಿದ್ದು, ಮಹಿಳೆಯರಿಗೆ ಉಚಿತ ಬಸ್ ಎಂಬುದು ಜಾರಿಯಲ್ಲಿದೆ. ಅದಕ್ಕೂ ಕೆಲವು ಅಡ್ಡಿ ಆತಂಕಗಳಿವೆ. ಉಳಿದ 4 ಗ್ಯಾರಂಟಿಗಳನ್ನು ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಕಾರ್ಯರೂಪಕ್ಕೆ ತರದೆ ಇದ್ದರೆ ಸದನದ ಒಳಗೆ ಮತ್ತು ಹೊರಗಡೆ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಇಂದು ರಾತ್ರಿ 12 ಗಂಟೆಗೆ ಅಮೆರಿಕ ಸಂಸತ್ ಉದ್ದೇಶಿಸಿ ನಮ್ಮ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅಂತವರು ಪ್ರಧಾನಿಯಾಗಿ ಸಿಕ್ಕಿರುವುದು ನಮ್ಮ ಸೌಭಾಗ್ಯ ಎಂದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ಜಗತ್ತಿನ 5 ನೇ ಅತಿ ದೊಡ್ಡ ಆರ್ಥಿಕ ಶಕ್ತಿಯ ದೇಶ ವಾಗಿದೆ. ಎಂಟು ವರ್ಷಗಳಲ್ಲಿ 530 ಬಿಲಿಯನ್ ಡಾಲರ್ ಬಂಡವಾಳವನ್ನು ಭಾರತದಲ್ಲಿ ಹೂಡಿಕೆ ಮಾಡಲಾ ಗಿದೆ. ಸ್ಟಾರ್ಟಪ್‌ನಲ್ಲಿ ವಿಶ್ವದ ಮೂರನೇ ರಾಷ್ಟ್ಟವಾಗಿದೆ. 2023ರಲ್ಲಿ ಅಮೆರಿಕಾ, ಚೀನಾಕ್ಕಿಂತಲೂ ಹೆಚ್ಚಿನ ಜಿಡಿಪಿ ಹೊಂದಿದೆ. ಈಗ ಭಾರತದ ಜಿಡಿಪಿ ಶೇ.9.1 ರಷ್ಟಿದೆ. ವಿವಿಧ ಯೋಜನೆಗಳ ಮೂಲಕ ಜನರ ಖಾತೆಗೆ ನೇರ ಹಣ ವರ್ಗಾವಣೆ ಆಗಿದೆ. ಆದರೂ, ಕರ್ನಾಟಕದ ಕಾಂಗ್ರೆಸ್‌ನವರು ಬಾಯಿ ಬಡುಕರಂತೆ ಮೋದಿಯವರ ಬಗ್ಗೆ ಮನ ಬಂದಂತೆ ಮಾತನಾಡುತ್ತಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :All the promises should be fulfilled by June 5, if not fulfilled, protest near the Gandhi statue of Vidhansouda.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...