Sat,May18,2024
ಕನ್ನಡ / English

ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಕೇಸ್‌ಗೆ ಟ್ವಿಸ್ಟ್, ಸಸ್ಪೆಂಡ್ ಮಾಡಿದ್ದೇವೆಂದ ಕಾಲೇಜು | JANATA NEWS

25 Jul 2023
2319

ಮಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವೀಡಿಯೋ ಸೆರೆ ಹಿಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ನಂತರ ಕಾಲೇಜು ಆಡಳಿತ ಮಂಡಳಿಯು ಸ್ಪಷ್ಟೀಕರಣವನ್ನು ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಪೊಲೀಸ್ ತನಿಖೆಗೆ ನೀಡಲಾಗಿದೆ. ಕಾಲೇಜಿನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮವರೇ ಆಗಿದ್ದಾರೆ. ಇದರಲ್ಲಿ ಜಾತಿ, ಧರ್ಮದ ಪ್ರಶ್ನೆಯೇ ಇಲ್ಲ ಎಂದರು.

ಕಾಲೇಜಿಗೆ ಮೊಬೈಲ್ ತರಲು ಅವಕಾಶ ಇಲ್ಲ. ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮಕ್ಕಳು ತಪ್ಪೊಪ್ಪಿಗೆ ಕೊಟ್ಟ ನಂತರವೂ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಕಾಲೇಜ್ ಗೆ ಮೊಬೈಲ್ ತರುವಂತಿಲ್ಲ, ಕಾನೂನು ಮೀರಿದ ಕಾರಣ ಮೊಬೈಲನ್ನು ಪೊಲೀಸರಿಗೆ ಒಪ್ಪಿಸಿದ್ದೇವೆ. ತಮಾಷೆಯ ವೀಡಿಯೋ ಮಾಡಿರುವುದಾಗಿ ಮೂವರು ಹೇಳಿದ್ದಾರೆ. ಮೊಬೈಲ್ ಕೊಡುವಾಗಲೇ ಅದರಲ್ಲಿ ವೀಡಿಯೋ ಇರಲಿಲ್ಲ. ವಾಶ್ ರೂಮ್ ಗೆ ಹೋದಾಗ ಮೊಬೈಲ್ ನೋಡಿದೆ, ತಕ್ಷಣ ಹೊರಗೆ ಬಂದೆ. ಸ್ಥಳದಲ್ಲೇ ವಿಡಿಯೋ ಡಿಲೀಟ್ ಮಾಡಿಸಿರುವುದಾಗಿ ಯುವತಿ ಹೇಳಿದ್ದಾಳೆ ಎಂದರು.

ನೂರಾರು ವಿದ್ಯಾರ್ಥಿನೀಯರ ಚಿತ್ರೀಕರಣ ಮಾಡಲಾಗಿದೆ ಎನ್ನುವುದು ಸರಿಯಲ್ಲ. ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ. ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ ಇದು ನನ್ನ ಮನವಿ.

ಇನ್ನು ಯಾರೊಬ್ಬರೂ ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ. ಕಾಲೇಜಿನ ಮಕ್ಕಳಲ್ಲಿ ನಾವು ಧರ್ಮವನ್ನು ನೋಡಲ್ಲ. ಚಿತ್ರೀಕರಿಸಿದ ಧರ್ಮದವರೇ ಕಾಲೇಜಿನಲ್ಲಿ ಘಟನೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ತಮಾಷೆಗೆ ಮಾಡಿರುವುದರಿಂದ ನನ್ನ ಭವಿಷ್ಯ, ಆ ಮೂವರ ಭವಿಷ್ಯ ಮುಖ್ಯ ಅಂತ ಸಂತ್ರಸ್ಥೆ ಬರೆದು ನೀಡಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮೀ ಕೃಷ್ಣಪ್ರಸಾದ್ ಮಾಹಿತಿಯನ್ನು ನೀಡಿದ್ದಾರೆ.

ಘಟನೆ -

ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ಮೂವರು ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆ ನಗ್ನ ಚಿತ್ರಗಳನ್ನು ರೆಕಾರ್ಡ್‌ ಮಾಡಿದ್ದಾರೆ. ನಂತರ, ಅವುಗಳನ್ನು ಅವರದ್ದೇ ಸಮುದಾಯದ ಯವಕರಿಗೆ ಕಳುಹಿಸಲಾಗುತ್ತದೆ. ನಂತರ, ಆ ವೀಡಿಯೋಗಳನ್ನು ಕೆಲವೊಂದು ವಾಟ್ಸಾಪ್‌ ಗುಂಪುಗಳಿಗೆ ಹಂಚಿಕೊಳ್ಳಲಾಗತ್ತಿತ್ತು. ಈ ಬಗ್ಗೆ ಹಿಂದೂ ವಿದ್ಯಾರ್ಥಿನಿಯರಿಗೆ ಮಾಹಿತಿ ತಿಳಿದು ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಇದನ್ನು ಪರಿಶೀಲನೆ ಮಾಡಿದ ಕಾಲೇಜು ಆಡಳಿತ ಮಂಡಳಿಯವರು, ಕ್ಯಾಮರಾ ಇಟ್ಟಿದ್ದ ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿದ್ದ ವೀಡಿಯೋಗಳನ್ನು ಡಿಲೀಟ್‌ ಮಾಡಿಸಿದ್ದಾರೆ.

RELATED TOPICS:
English summary :Twist in the case of filming in the college toilet, the college has been suspended

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...