Sat,May18,2024
ಕನ್ನಡ / English

ಯಾವ ಸಮುದಾಯವನ್ನು ನಾನು ರಾಜಕೀಯ ಸ್ವರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ | JANATA NEWS

01 Oct 2023
2704

ರಾಮನಗರ : ಯಾವ ಸಮುದಾಯವನ್ನು ನಾನು ರಾಜಕೀಯ ಸ್ವರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ ಎಂದು ಎಚ್​ಡಿಕೆ ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಸಂಬಂಧ ಬಿಡದಿಯ ತೋಟದ ಮನೆಯಲ್ಲಿ ಇಂದು ಸಭೆ ನಡೆಸಿ ಮಾತನಾಡಿದ ಅವರು, ಬಿಜೆಪಿ ಜೊತೆಗಿನ ಮೈತ್ರಿ ಸಂಬಂಧಕ್ಕೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ ಎಂದು ಘೋಷಣೆ ಮಾಡಿದರು.

ರಾಮನಗರದ ಮಣ್ಣಲ್ಲಿಯೇ ನಾನು ಮಣ್ಣಗೋದು, ಈ ಮಣ್ಣಿನ ಸಾಕ್ಷಿಯಾಗಿ ಹೇಳುತ್ತಿದ್ದೇನೆ. ಈ ನಾಡಿನ ಋಣ ತೀರಿಸುತ್ತೇನೆ. ದೇವೇಗೌಡರ 91ನೇ ವಯಸ್ಸಿನಲ್ಲಿ ಪಕ್ಷಕ್ಕೆ ಏನು ಆಘಾತ ಆಗಿದೆ, ಅದನ್ನು ಅವರು ಯೋಚನೆ ಮಾಡುತ್ತಿದ್ದಾರೆ. ಕಾವೇರಿ ಬಗ್ಗೆ ಏನು ಅನ್ಯಾಯ ಆಗಿದೆ, ಅದನ್ನು ನಾನು ಸರಿ ಮಾಡುತ್ತೇನೆ. ಈ ಮೈತ್ರಿಯಿಂದ ರಾಜ್ಯಕ್ಕೆ ಒಳ್ಳೆಯದು ಆಗುತ್ತದೆ. ನಮ್ಮ ನೀರು ಉಳಿಸೋದಕ್ಕೆ ಏನು ಮಾಡಬೇಕು, ಅದನ್ನು ಮಾಡುತ್ತೇನೆ.

ಜಲಧಾರೆಯಲ್ಲೂ ಇದಕ್ಕೆ ಪರಿಹಾರ ಇದೆ, ಜನರು ಅವಕಾಶ ಕೊಡಲಿಲ್ಲ. ಈ ಮೈತ್ರಿಯಿಂದ ಅಧಿಕಾರಕ್ಕೆ ಬರುವುದು ನನ್ನ ಉದ್ದೇಶ ಅಲ್ಲ. ನೀರಾವರಿ ಅನ್ಯಾಯ ಸರಿ ಮಾಡುವುದೇ ನನ್ನ ಗುರಿ. ಇದೇ ಕೇಂದ್ರ ಸರ್ಕಾರದ ನೆರವಿನಿಂದ ಎಲ್ಲಾ ನೀರಾವರಿ ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಮುಸ್ಲಿಂ ಬಾಂಧವರು ಎಚ್ಚರಿಕೆಯಿಂದ ಇರಿ, ಕೆಲ ಕಾಂಗ್ರೆಸ್‌ ನಾಯಕರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಮತಕ್ಕಾಗಿ ಒಂದು ಸಮಾಜವನ್ನ ಓಲೈಕೆ ಮಾಡುವ ಅವಶ್ಯಕತೆಯಿಲ್ಲ. ಮುಸ್ಲಿಂ ಬಾಂಧವರ ಬಗ್ಗೆ ನಮ್ಮ ಕಮಿಟ್‌ಮೆಂಟ್‌ ಏನು ಅಂತ ಎಲ್ಲರಿಗೂ ಗೊತ್ತು. ಕಳೆದ ಬಾರಿ ಉಂಟಾದ ಸಮಸ್ಯೆ ಬಗ್ಗೆ ಧ್ವನಿ ಎತ್ತಿ ಅವರ ಪರವಾಗಿ ನಿಂತಿದ್ದು ನಾನು. ಹಾಗಾಗಿ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಮುಂದಿನ ಒಂದು ತಿಂಗಳ ಒಳಗೆ 31 ಜಿಲ್ಲೆಗಳಲ್ಲೂ ಸಭೆ ಮಾಡಲಿದ್ದೇವೆ. ಪಕ್ಷದ ಮುಖಂಡರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಕೆಲಸವಾಗುತ್ತೆ. ಮೈತ್ರಿಯಿಂದ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್‌ ಸಮಸ್ಯೆ ಉಂಟಾಗುವುದಿಲ್ಲ. ಈ ಬಗ್ಗೆ ನಾನು ಭರವಸೆ ಕೊಡುತ್ತೇನೆ. ಈ ಬಗ್ಗೆ ಮುಕ್ತವಾಗಿ ಮತ್ತೊಮ್ಮೆ ಚರ್ಚೆ ಮಾಡುತ್ತೇವೆ. ಯಾವ ಮುಖಂಡನ ರಾಜಕೀಯ ಮಸಕು ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲರ ಹಿತ ಕಾಯುವುದು ನಮ್ಮ ಬದ್ಧತೆ. ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಾನು ಪ್ರಾಮಾಣಿಕವಾಗಿ ಈ ಮಾತನ್ನು ಹೇಳುತ್ತಿದ್ದೇನೆ. ಇನ್ನು ಮೇಲೆ ಮಾತನ್ನು ಕಡಿಮೆ ಮಾಡಿ, ಕೆಲಸದ ಕಡೆ ಹೆಚ್ಚು ಕೆಲಸ ಮಾಡುತ್ತೇನೆ ಎಂದು ಹೇಳಿದರು.

RELATED TOPICS:
English summary :I have not used any community for political gain

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...