ಕ್ಯಾನ್ಸರ್ ಗೆ ಸುಧಾರಿತ ಸಾವಯವ ಆಧಾರಿತ ಔಷಧೀಯ ಪದ್ದತಿಯಿಂದ ಪರಿಹಾರ ಸಾಧ್ಯ: ಡಾ. ದೇಸಾಯಿ | Janata news

10 Nov 2018
2419
Cancer can be cured by methods of organic medicines: Dr. Desai

ಕಾರವಾರ : ಅಲೋಪಥಿಕ್, ಆಯುರ್ವೇದಿಕ್, ಸಿದ್ಧ, ಹೋಮಿಯೋಪಥಿಕ್ ಮುಂತಾದ ವೈದ್ಯ ಪದ್ಧತಿಯಲ್ಲಿ ಪರಿಹಾರ ಕಾಣದ ಹಲವಾರು ಎನ್‍ಸಿಡಿಎಸ್ ರೋಗಗಳಿಗೆ ಹೊಸ ಸುಧಾರಿತ ಸಾವಯವ ಆಧಾರಿತ ಔಷಧೀಯ ವಿಜ್ಞಾನ ಪದ್ಧತಿಯಲ್ಲಿ ಪರಿಹಾರವಿದೆ, ಎಂದು ಗೋವಾದ ನವಜೀವನ್ ಗ್ಲೋಬಲ್ ಹೆಲ್ತ್ ಸೆಂಟರ್ ನ ಡಾ.ಎಂ.ಜಿ.ದೇಸಾಯಿ ತಿಳಿಸಿದರು.

ಅವರು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದು ಕ್ಯಾನ್ಸರ್, ಕಿಡ್ನಿ ವೈಫಲ್ಯ, ಹೃದಯರೋಗ, ಮಧುಮೇಹ ಮುಂತಾದ ಎನ್‍ಸಿಡಿಎಸ್ ವ್ಯಾಪ್ತಿಗೆ ಒಳಪಟ್ಟ ಖಾಯಿಲೆಗಳು ಹೆಚ್ಚುತ್ತಿದೆ. ಇವುಗಳ ನಿರ್ವಹಣೆ ತುಂಬ ವೆಚ್ಚದಾಯಕವಾಗಿದೆ. ಆದರೆ ರೋಗ ಗುಣಮುಖವಾಗುವ ಸಾಧ್ಯತೆ ತುಂಬ ಕಡಿಮೆ. ಈ ಹಿನ್ನೆಲೆಯಲ್ಲಿ ಅಲ್ಲಿ ಪರಿಹಾರ ಕಾಣದ, ಜನರಿಗೆ ತುಂಬ ಕಡಿಮೆ ಖರ್ಚಿನಲ್ಲಿ ಅತೀ ಶೀಘ್ರವಾಗಿ ಗುಣಪಡಿಸುವ ಔಷಧೀಯ ಪದ್ಧತಿಯನ್ನು ಆವಿಷ್ಕರಿಸಲಾಗಿದೆ. ಈ ಪದ್ಧತಿಯನ್ವಯ ಹಣಗಳಿಸುವ ಉದ್ದೇಶ ಬದಿಗಿಟ್ಟು, ನೊಂದ, ಬಡ ಜನರ ಆರೋಗ್ಯ ಸೇವೆಯ ಗುರಿಯೊಂದಿಗೆ ಮುಂದಡಿ ಇಟ್ಟಿದ್ದೇನೆ. ಈ ಕುರಿತು ಅನೇಕ ವೈದ್ಯರಿಗೆ ತರಬೇತಿ ನೀಡುತ್ತಿದ್ದೇನೆ. ನನ್ನ ಸಂಶೋಧನೆಯ ಫಲ ಜಗತ್ತಿಗೆ ದೊರೆಯಬೇಕು. ಈ ಬಗ್ಗೆ ಡಬ್ಲುಎಚ್‍ಓನ ಗಮನಕ್ಕೂ ತರಲಾಗಿದೆ, ಎಂದು ಅವರು ಮಾಹಿತಿ ನೀಡಿದರು.

ಪರಿಸರ ಮಾಲೀನ್ಯ ಹಾಗೂ ವಿಷಕಾರಿ ಆಹಾರ, ರಾಸಾಯನಿಕ ಭರಿತ ಔಷಧಿ ಸೇವನೆಯಿಂದ ಮನುಷ್ಯನಿಗೆ ನಾನಾ ರೀತಿಯ ಕಾಯಿಲೆಗಳು ಉಂಟಾಗುತ್ತಿವೆ. ಈ ಪದ್ಧತಿಯನ್ವಯ ರಾಸಾಯನಿಕ ಮುಕ್ತ, ಸಂಪೂರ್ಣವಾಗಿ ಸಾವಯವ ಆಧಾರಿತ ಔಷಧಿಗಳನ್ನು ತಯಾರಿಸಲಾಗುತ್ತದೆ. ಅದೇ ರೀತಿ ನಮ್ಮ ದೇಹಕ್ಕೆ ಒಗ್ಗದ ವಿಷಕಾರಿ ಆಹಾರ ಕೈಬಿಟ್ಟು, ದೇಹಕ್ಕೆ ಬೇಕಾದ ಪೌಷ್ಠಿಕ ಆಹಾರವನ್ನು ಮಾತ್ರ ಸೇವನೆ ಮಾಡಲು ಸಲಹೆ ನೀಡಲಾಗುತ್ತದೆ. ಇಲ್ಲಿ ಶಿಸ್ತುಬದ್ಧ ಜೀವನ, ವ್ಯಾಯಾಮ ಅತೀ ಅವಶ್ಯಕವಾಗಿರುತ್ತದೆ. ಜತೆಗೆ ಅತೀ ಕಡಿಮೆ ವೆಚ್ಚದ ಶುದ್ಧ ಸಾವಯವ ಪದ್ಧತಿಯಲ್ಲಿ ತಯಾರಿಸಲಾದ ಔಷಧಿಗಳನ್ನು ರೋಗಿಗಳಿಗೆ ನೀಡಲಾಗುತ್ತದೆ. ಈ ಎಲ್ಲ ಮಾನದಂಡಗಳ ಅನ್ವಯಿಸಿಕೊಂಡು, ಗೋವಾದಲ್ಲಿ ರೋಗಿಗಳಿಗೆ ವೈದ್ಯಕೀಯ ಉಪಚಾರ ಮಾಡಲಾಗುತ್ತಿದೆ. ಕಳೆದ 15 ವರ್ಷಗಳಿಂದ ಗೋವಾ ಹಾಗೂ ಮಹಾರಾಷ್ಟ್ರದ ಸುಮಾರು 32 ಸಾವಿರಕ್ಕೂ ಹೆಚ್ಚಿನ ರೋಗಿಗಳು ಈ ಪದ್ಧತಿಯಿಂದ ಚಿಕಿತ್ಸೆ ಪಡೆದು ಆರೋಗ್ಯಕರ ಜೀವನ ಸಾಗಿಸುತ್ತಿದ್ದಾರೆ. ಅದರಲ್ಲಿ 10 ಸಾವಿರದಷ್ಟು ಕ್ಯಾನ್ಸರ್ ಪೀಡಿತ ರೋಗಿಗಳಿದ್ದಾರೆ. ಈ ಪದ್ಧತಿಯಲ್ಲಿ ಯಾವುದೇ ದುಷ್ಪರಿಣಾಮವಿಲ್ಲ. ಅನ್ಯ ಪದ್ಧತಿಯ ಔಷಧಿಯಂತೆ ಘಾಟು ವಾಸನೆ ಇಲ್ಲ. ಒಂದು ರೋಗಕ್ಕೆ ನೀಡಿದ ಔಷಧಿ ಬಹುರೋಗಗಳಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಉಲ್ಬಣಗೊಂಡ ಮಧುಮೇಹ, ಹೃದಯ ಕಾಯಿಲೆ, ಕಿಡ್ನಿ ತೊಂದರೆ ಹಾಗೂ ಸೋರಿಯಾಸೀಸ್‍ನಂತಹ ಚರ್ಮರೋಗವನ್ನು ಪರಿಣಾಮಕಾರಿಯಾಗಿ ಗುಣಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಪದ್ಧತಿಯನ್ನು ಇತರೆ ಪದ್ಧತಿಗಳಿಗೆ ಪರ್ಯಾಯವಾಗಿ ಜನಪ್ರಿಯಗೊಳಿಸುವ ಪ್ರಯತ್ನ ಸಾಗಿದೆ, ಎಂದರು.

ದಕ್ಷಿಣ ಗೋವಾ ಹಾಗೂ ಉತ್ತರ ಕನ್ನಡ ಜಿಲ್ಲೆಯ ಉತ್ತರ ಭಾಗದಲ್ಲಿ ಕಿಡ್ನಿ ಸಮಸ್ಯೆ ಹಾಗೂ ಕ್ಯಾನ್ಸರ್ ನಂತಹ ಅನೇಕ ಕಾಯಿಲೆಗಳು ಹೆಚ್ಚಾಗಿ ಕಂಡು ಬರುತ್ತಿದೆ. ಸದ್ಯ ದಕ್ಷಿಣ ಗೋವಾ ಕೇಂದ್ರಸ್ಥಾನವನ್ನಾಗಿಟ್ಟುಕೊಂಡು ಇಂತಹ ರೋಗಿಗಳಿಗೆ ಆರೋಗ್ಯ ಸೇವೆ ನೀಡುವ ಯೋಜನೆ ರೂಪಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ರೋಗಿಗಳ ಅನುಕೂಲಕ್ಕಾಗಿ ಮುಂದಿನ ದಿನಗಳಲ್ಲಿ ಕಾರವಾರದ ಸದಶಿವಗಡದಲ್ಲಿ ಡಾ.ಮುಕಾದ್ದಂ ನೇತ್ರತ್ವದಲ್ಲಿ ಆನ್‍ಲೈನ್ ಕೇಂದ್ರ ತೆರೆಯಲಾಗುವುದು ಎಂದರು. ಈ ಸಂದರ್ಭದಲ್ಲಿ ಡಾ.ಹೀರನ್ ಶಾ, ಡಾ.ಮುಕಾದ್ದಂ, ಚೇತನ್ ಜೋಶಿ ಉಪಸ್ಥಿತರಿದ್ದರು.

English summary :Cancer can be cured by methods of organic medicines: Dr. Desai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...