ಡಿ.ಜೆ.ಹಳ್ಳಿ ಗಲಭೆ ಸಂಪೂರ್ಣ ಆಯೋಜಿತ, ಪೋಸ್ಟ್ ಮಾಡಿದ್ದು ಕಾಂಗ್ರೆಸ್ ಕಾರ್ಯಕರ್ತ - ಡಿಸಿಎಂ | Janata news
ಬೆಂಗಳೂರು : ಕೆಲವೇ ಗಂಟೆಯೊಳಗೆ ಡಿ.ಜೆ.ಹಳ್ಳಿ ಮತ್ತು ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ನವೀನ್ ಕಾಂಗ್ರೆಸ್ ಕಾರ್ಯಕರ್ತ, ಎಂದಿರುವ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಸದ್ಯಕ್ಕೆ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ, ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು, ಸಚಿವ ಸಿ.ಟಿ.ರವಿ ಅವರು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಲಾದ ನವೀನ್ ಪೋಸ್ಟ್ ಮಾಡಿರುವ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ, ಪ್ರಿಯಂಕಾ ಗಾಂಧಿ ಚಿತ್ರಗಳನ್ನು ಹಂಚಿಕೊಂಡು, ಯಾವ ಮುಖ ಇಟ್ಟುಕೊಂಡು ನವೀನ್ ನನ್ನು ಬಿಜೆಪಿಯವ ಎಂದು ಹೇಳುತ್ತಿರಿ? ಎಂದು ಪ್ರಶ್ನಿಸಿದ್ದರು.
— C T Ravi 🇮🇳 ಸಿ ಟಿ ರವಿ (@CTRavi_BJP) August 12, 2020
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಡಿಸಿಎಂ ಡಾ.ಅಶ್ವತನಾರಾಯಣ ಅವರು, ಈ ಬಗ್ಗೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ಸಿಗರ ನಡೆ ಸರಿ ಇಲ್ಲ. ನವೀನ್ ಬಿಜೆಪಿ ಕಾರ್ಯಕರ್ತ ಅಲ್ಲ. ಕಾಂಗ್ರೆಸ್ ಕಾರ್ಯಕರ್ತ. ಈ ಬಗ್ಗೆ ಡಿಕೆ ಶಿವಕುಮಾರ್ ಅವರಿಗೆ ಮಾಹಿತಿ ಕೊರತೆ ಇದೆ. ಒಂದು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿರುವ ವ್ಯಕ್ತಿ ಹೀಗೆ ಮಾತಾಡೋದು ಸರಿಯಲ್ಲ, ಎಂದಿದ್ದಾರೆ.
ಮುಸ್ಲಿಂ ಧರ್ಮದ ಪ್ರವಾದಿ ವಿರುದ್ಧ ಪೋಸ್ಟ್ ಹಿನ್ನೆಲೆಯಲ್ಲಿ ನಗರದ ಡಿ.ಜೆ.ಹಳ್ಳಿ ವ್ಯಾಪಿಯಲ್ಲಿ ಹಿಂಸಾಚಾರ ನಡೆಸಿದ ಎಲ್ಲರನ್ನೂ ಸರ್ಕಾರ ಶಿಕ್ಷೆ ನೀಡಲಿದೆ, ಎಂದು ಡಿಸಿಎಂ ಡಾ.ಅಶ್ವತನಾರಾಯಣ ಹೇಳಿದ್ದಾರೆ. ಅವಾಂತರಗಳಲ್ಲಿ ಯಾವುದೇ ದಂಗೆಕೋರರು ಮತ್ತು ಅಗ್ನಿಸ್ಪರ್ಶ ಮಾಡಿದವರನ್ನು ನಮ್ಮ ಸರ್ಕಾರವು, ಅವರು ಎಲ್ಲಿ ಅಡಗಿದ್ದರೂ ಬೇಟೆಯಾಡಲಿದೆ, ಎಂದು ಹೇಳಿದ್ದಾರೆ.
ಹಿಂಸೆಯ ಪ್ರಮಾಣ ಮತ್ತು ಸಂಘಟಿತ ಸ್ವರೂಪವು ಈ ಜಿಹಾದಿ ಸಂಘಟನೆಗಳಿಂದ ಸಂಪೂರ್ಣವಾಗಿ ಆಯೋಜಿಸಲಾಗಿದೆ ಎಂಬುದನ್ನು ಖಚಿತಪಡಿಸುತ್ತದೆ, ಎಂದು ಅವರು ಹೇಳಿದ್ದಾರೆ.
ಈ ಹಿಂಸಾಚಾರವು ಕಾಂಗ್ರೆಸ್ ಪಕ್ಷದ ಓಲೈಕೆ ರಾಜಕಾರಣ ಮತ್ತು ಅವರ ಸ್ವಂತ ಪಕ್ಷದ ಆಂತರಿಕ ಜಗಳಗಳ ನೇರ ಪರಿಣಾಮವಾಗಿದೆ. ಆಘಾತಕಾರಿ ಸಂಗತಿಯೆಂದರೆ, ಬೆಂಕಿಯಿಡುವ ವಿಷಯವನ್ನು ಪೋಸ್ಟ್ ಮಾಡಿದ ವ್ಯಕ್ತಿ ಸ್ವತಃ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ.
ಈ ಘಟನೆಯು ಕಾನೂನು ಪಾಲಿಸುವ ಮುಗ್ಧ ನಾಗರಿಕರಲ್ಲಿ ಭಯವನ್ನು ಉಂಟುಮಾಡಿತು ಮತ್ತು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಅಪಾರ ಹಾನಿ ಉಂಟುಮಾಡಿದೆ, ಎಂದು ಹೇಳಿ ಡಾ.ಅಶ್ವತ್ಥನಾರಾಯಣ ಟ್ವೀಟ್ ಮಾಡಿದ್ದಾರೆ.
English summary :D.J.Halli riot entirely orchestrated, posted by congress youth - DCM