ನೂತನ ಸಂಪುಟದ ಸಚಿವರ ಪಟ್ಟಿ ಅಂತಿಮ, ಹೊಸ ಸಂಪುಟದ ಮಂತ್ರಿಗಳ ಪಟ್ಟಿ ಇಲ್ಲಿದೆ ನೋಡಿ | ಜನತಾ ನ್ಯೂಸ್
ಬೆಂಗಳೂರು : ಐವರು ಹೊಸ ಮುಖಗಳಿಗೆ ಈ ಭಾರಿ ಸಚಿವ ಸ್ಥಾನ ಸಿಕ್ಕಿದ್ದು, ಇಂದು ಒಟ್ಟು 29 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರನ್ನು ಉಳಿಸಿಕೊಳ್ಳಲಾಗಿದೆ. 7 ಸಚಿವರಿಗೆ ಈ ಬಾರಿ ಕೊಕ್ ನೀಡಲಾಗಿದೆ. ಜೊತೆಗೆ ಹೊಸಬರನ್ನೂ ಸಿಎಂ ಬೊಮ್ಮಾಯಿ ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಇಂದು ಮಧ್ಯಾಹ್ನ ರಾಜಭವನದ ಗಾಜಿನ ಮನೆಯಲ್ಲಿ ನೂತನ 29 ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ನಡೆಸಿ, ಬಿಜೆಪಿ ಹೈಕಮಾಂಡ್ ಜೊತೆ ಸಮಾಲೋಚಿಸಿ ಅಂತಿಮ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಚಿವರುಗಳ ಪಟ್ಟಿ ಇಂತಿದೆ:
ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ,
ಆರ್.ಅಶೋಕ್- ಪದ್ಮನಾಭ ನಗರ,
ಅರವಿಂದ ಲಿಂಬಾವಳಿ- ಮಹದೇವಪುರ,
ಡಾ.ಸಿ.ಎನ್.ಅಶ್ವತ್ಥ ನಾರಾಯಣ - ಮಲ್ಲೇಶ್ವರ,
ಉಮೇಶ್ ಕತ್ತಿ- ಹುಕ್ಕೇರಿ,
ಎಸ್.ಟಿ.ಸೋಮಶೇಖರ್- ಯಶವಂತಪುರ,
ಡಾ.ಕೆ.ಸುಧಾಕರ್ - ಚಿಕ್ಕಬಳ್ಳಾಪುರ,
ಬೈರತಿ ಬಸವರಾಜ - ಕೆ ಆರ್ ಪುರಂ,
ಮುರುಗೇಶ್ ನಿರಾಣಿ - ಬಿಳಿಗಿ,
ಶಿವರಾಂ ಹೆಬ್ಬಾರ್- ಯಲ್ಲಾಪುರ,
ಶಶಿಕಲಾ ಜೊಲ್ಲೆ- ನಿಪ್ಪಾಣಿ,
ಕೆಸಿ ನಾರಾಯಣ್ ಗೌಡ - ಕೆಆರ್ ಪೇಟೆ,
ಸುನೀಲ್ ಕುಮಾರ್ - ಕಾರ್ಕಳ,
ಅರಗ ಜ್ಞಾನೇಂದ್ರ - ತೀರ್ಥಹಳ್ಳಿ,
ಗೋವಿಂದ ಕಾರಜೋಳ-ಮುಧೋಳ,
ಮುನಿರತ್ನ- ಆರ್ ಆರ್ ನಗರ,
ಎಂ.ಟಿ.ಬಿ ನಾಗರಾಜ್ - ಎಂ ಎಲ್ ಸಿ,
ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್,
ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ,
ಹಾಲಪ್ಪ ಆಚಾರ್ - ಯಲ್ಬುರ್ಗ,
ಶಂಕರ್ ಪಾಟೀಲ್ ಮುನೇನಕೊಪ್ಪ - ನವಲುಗುಂದ,
ಕೋಟಾ ಶ್ರೀನಿವಾಸ ಪೂಜಾರಿ - ಎಂ ಎಲ್ ಸಿ,
ಪ್ರಭು ಚೌವ್ಹಾಣ್ - ಔರಾದ್,
ವಿ ಸೋಮಣ್ಣ - ಗೋವಿಂದರಾಜನಗರ,
ಎಸ್ ಅಂಗಾರ-ಸುಳ್ಯ,
ಆನಂದ್ ಸಿಂಗ್ - ಹೊಸಪೇಟೆ,
ಸಿ ಸಿ ಪಾಟೀಲ್ - ನರಗುಂದ,
ಬಿಸಿ ನಾಗೇಶ್ - ತಿಪಟೂರು ಮತ್ತು
ಬಿ.ಶ್ರೀ ರಾಮುಲು- ಮೊಳಕಾಲ್ಮೂರು ಕ್ಷೇತ್ರದವರಾಗಿದ್ದಾರೆ.
7 ಮಂದಿ ವಕ್ಕಲಿಗ, 8 ಮಂದಿ ಲಿಂಗಾಯತ, 3 ಎಸ್ಸಿ, ತಲಾ 1 ರೆಡ್ಡಿ, ಮಹಿಳೆ, ಎಸ್ಟಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಲಾಗಿದೆ. ಜನಪರ ಆಡಳಿತ ಕೊಡುವ ಹಿನ್ನೆಲೆ, ಬರುವ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಸಂಪುಟ ರಚನೆ ಆಗಿದೆ ಎಂದರು.