ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂಸ್
ಬೆಳಗಾವಿ : ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ರಾಮನಗರ ಕಾಲೋನಿಯಲ್ಲಿ ನಡೆದಿದೆ. ಕಿರಣಾ ವಿಭೂತಿ(10) ಮೃತ ಬಾಲಕಿ.
ಧಾರಕಾವಾಗಿ ಸುರಿದಿದ್ದ ಮಳೆಗೆ ರಾಮನಗರದ ಹಳ್ಳ ತುಂಬಿ ಹರಿದಿದ್ದು, ಅಂಗಡಿಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಕಾಲು ಜಾರಿ ಹಳ್ಳಕ್ಕೆ ಬಿದ್ದು ಕೊಚ್ಚಿ ಹೋಗಿದ್ದಳು. ಕೂಡಲೇ ಕುಟುಂಬಸ್ಥರು, ಎಸ್ಡಿಆರ್ಎಫ್ ತಂಡಕ್ಕೆ ಮಾಹಿತಿ ನೀಡಿದ್ದು, ಸಿಬ್ಬಂದಿ ಮೃತದೇಹ ಹೊರ ತೆಗೆದಿದ್ದಾರೆ. ಇದೀಗ ಬಾಲಕಿಯ ಶವ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಹುಕ್ಕೇರಿ ತಾಲೂಕಿನ ಗೌಡವಾಡ, ಅರ್ಜುನವಾಡ ಗ್ರಾಮಗಳಿಗೂ ಹೀರಣ್ಯಕೇಶಿ ನದಿ ನೀರು ನುಗ್ಗಿದೆ. ಕೃಷ್ಣಾ ನದಿಯ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆ ಉಂಟಾಗಿದ್ದು, 2 ಲಕ್ಷ 40 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಯ ಒಳಹರಿವು ಇದ್ದರೆ ಸಂಜೆವರೆಗೂ 3 ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ಕೃಷ್ಣಾ ನದಿಗೆ ಹರಿದು ಬರುವ ಸಾಧ್ಯತೆ ಇದೆ.