ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂಸ್
ನವದೆಹಲಿ : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಇಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶುಭಕೋರಿದ್ದಾರೆ.
ಇಂದು ಯಡಿಯೂರಪ್ಪನವರ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಬಿಜೆಪಿ ಪಕ್ಷ ಮತ್ತು ಕರ್ನಾಟಕದಲ್ಲಿ ಪಕ್ಷದ ಬೆಳವಣಿಗೆಗೆ ಯಡಿಯೂರಪ್ಪನವರು ನೀಡಿದ ಸ್ಮರಣೀಯ ಕೊಡುಗೆ ಬಗ್ಗೆ ಮಾತನಾಡಲು ಯಾವ ಪದಗಳೂ ನ್ಯಾಯ ಒದಗಿಸುವುದಿಲ್ಲ. ಅರ್ಥಾತ್ ಪದಗಳೇ ಇಲ್ಲ. ಅದೆಷ್ಟೋ ದಶಕಗಳಿಂದ ಯಡಿಯೂರಪ್ಪ ಅವರು ಬಿಜೆಪಿ ಪಕ್ಷಕ್ಕಾಗಿ ಶ್ರಮವಹಿಸಿ ದುಡಿದಿದ್ದಾರೆ. ಪಕ್ಷ ಸಂಘಟನೆಗಾಗಿ ಕರ್ನಾಟಕವನ್ನು ಸುತ್ತಿದ್ದಾರೆ. ಪಕ್ಷವನ್ನು ಜನರು ಒಪ್ಪಿಕೊಳ್ಳುವಂತೆ ಮಾಡಿದ್ದಾರೆ. ಸಾಮಾಜಿಕ ಅಭಿವೃದ್ಧಿ ಕಾರ್ಯಗಳಿಂದ ಮೆಚ್ಚುಗೆ ಪಡೆದಿದ್ದಾರೆ ಎಂದು ಹೊಗಳಿದ್ದಾರೆ.
No words will ever do justice to the monumental contribution of Shri @BSYBJP Ji towards our Party and for Karnataka’s growth. For decades, he toiled hard, travelled across all parts of Karnataka and struck a chord with people. He is admired for his commitment to social welfare.
— Narendra Modi (@narendramodi) July 28, 2021