ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂಸ್
ಮೈಸೂರು : ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದ್ದಿದ್ದು, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಹಾಗೆಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
"ಅಲ್ಲದೇ ತಂದೆ ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಮಹಾತ್ಮಾ ಗಾಂಧಿಯ ಮಗ ಮಹಾತ್ಮನಾಗಲಿಲ್ಲ. ಅದೇ ರೀತಿ ಬೊಮ್ಮಾಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ,' ಎಂದು ಹೇಳಿದರು.
"ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾ? ಎಂದು ಪ್ರಶ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಹೆಸರನ್ನು ಸೂಚಿಸಿರುವುದು ಯಡಿಯೂರಪ್ಪ, ಸರ್ಕಾರದ ಮೇಲೆ ಬಿಎಸ್ವೈ ಸಹಜವಾಗಿ ಹಿಡಿತ ಹೊಂದಿರುತ್ತಾರೆ. ಹೀಗಿರುವಾಗ ಬೊಮ್ಮಾಯಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾ?,' ಎಂದರು.
ಆದರೆ, ಈ ಕ್ಷಣದಲ್ಲೇ ನಾನು ಬೊಮ್ಮಯಿ ಬಗ್ಗೆ ಏನೂ ಹೇಳುವುದಿಲ್ಲ. ಅವರ ಆಡಳಿತವನ್ನು ಕಾದು ನೋಡೋಣ. ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದರು.
ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ ಇಳಿದಿದ್ದಾರೆ, ಬೊಮ್ಮಾಯಿ ಸಿಎಂ ಆಗಿದ್ದಾರೆ ಅಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ? ಕೋಮುವಾದ ಹೊರಟು ಹೋಗುತ್ತಾ? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ? ಬಿಜೆಪಿಯವರು ಯಾವತ್ತಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ. ಆದ್ದರಿಂದ ಬಿಜೆಪಿ ಸರ್ಕಾರದಿಂದ ಯಾವುದೇ ನೀರೀಕ್ಷೆ ಮಾಡೋದಿಲ್ಲ. ಆದರೆ, ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಒಳ್ಳೆಯ ಆಡಳಿತ ನೀಡಲಿ ಎಂದು ಸಲಹೆ ನೀಡಿದರು.