ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂಸ್
ಮೈಸೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಯಾಕನೂರು ಗ್ರಾಮದ ಕಾವ್ಯಾ ಎಂಬ ಗೃಹಿಣಿ ಸಾವನ್ನಪ್ಪಿದ್ದಾರೆ.
ಕಾವ್ಯಾ (21) ಮೃತ ದುರ್ದೈವಿ. ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಕಾವ್ಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. 21 ವರ್ಷದ ಕಾವ್ಯಾ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾವ್ಯಾ ಒಂದೂವರೆ ವರ್ಷದ ಹಿಂದೆ ಯಾಕನೂರು ಗ್ರಾಮದ ಚಂದ್ರಶೇಖರ್ ಜತೆ ವಿವಾಹವಾಗಿದ್ದಳು. ಸಣ್ಣಪುಟ್ಟ ವಿಚಾರಗಳಿಗೆ ಅತ್ತೆ ಜತೆ ಕಲಹ ನಡೆಯುತ್ತಿತ್ತು.
ನನ್ನ ಮಗನಿಂದ ನನ್ನನ್ನು ದೂರ ಮಾಡಿದ್ದೀಯ ಎಂದು ಕಾವ್ಯಾಳಿಗೆ ಅತ್ತೆ ಪುಟ್ಟಮಾದಮ್ಮ ಕಿರುಕುಳ ನೀಡುತ್ತಿದ್ದಳು. ಅತ್ತೆ ಕಿರುಕುಳಕ್ಕೆ ಬೇಸತ್ತ ಕಾವ್ಯ 3 ದಿನಗಳ ಹಿಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕಾವ್ಯ ಮೃತಪಟ್ಟಿದ್ದಾಳೆ.
ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದ ಕಾವ್ಯ, ತನ್ನ ಸಾವಿಗೆ ಅತ್ತೆಯೇ ಕಾರಣವೆಂದು ಹೇಳಿದ್ದಾರೆ. ಸಾಯುವುದಕ್ಕೂ ಮೊದಲು ಹೇಳಿಕೆ ನೀಡಿರುವ ಕಾವ್ಯಾ, ನನ್ನ ಪತಿ ತಪ್ಪು ಮಾಡಿಲ್ಲ. ಅವರಿಗೆ ಏನೂ ಮಾಡಬೇಡಿ ಎಂದಿದ್ದಾರೆ.