ಮಾಜಿ ಕೇಂದ್ರ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಪಕ್ಷ ಸೇರಿದ ಎರಡೇ ದಿನಕ್ಕೆ ಟಿಎಂಸಿ ರಾಜ್ಯ ಉಪಾಧ್ಯಕ್ಷ | Janata news
ಕೋಲ್ಕೊತ್ತಾ : ಅವರು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾದ ಎರಡು ದಿನಗಳ ನಂತರ, ಮಾಜಿ ಕೇಂದ್ರ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಅವರನ್ನು ಸೋಮವಾರ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡಿದೆ. ಅವರನ್ನು ಟಿಎಂಸಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿಯೂ ಮಾಡಲಾಗಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದ ಯಶ್ವಂತ್ ಸಿನ್ಹಾ ಅವರು ಶನಿವಾರ ಟಿಎಂಸಿಗೆ ಸೇರಿದ ದಿನವೇ ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ, ಸಿನ್ಹಾ ಅವರು ಸಕ್ರಿಯ ಪಕ್ಷದ ರಾಜಕೀಯಕ್ಕೆ ಮರಳಲು ನಂದಿಗ್ರಾಮ್ ನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯೇ, ಪ್ರಮುಖ ಕಾರಣ ಎಂಬಂತೆ ಅವರು ಹೇಳಿದರು.
ಮಾರ್ಚ್ 10ರಂದು ನಂದಿಗ್ರಾಮ್ ನಲ್ಲಿ ಪ್ರಚಾರ ನಡೆಸುತ್ತಿದ್ದಾಗ ರಸ್ತೆಯಲ್ಲಿದ್ದ ಕಂಬಕ್ಕೆ ಮಮತಾ ಅವರ ಕಾರಿನ ಬಾಗಿಲು ಬಡಿದ ಪರಿಣಾಮ, ಘಟನೆಯಲ್ಲಿ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದು, ಈ ಘಟನೆಯು ಆಳವಾಗಿ ಬೇರೂರಿರುವ ಪಿತೂರಿ, ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಚುನಾವಣಾ ಆಯೋಗವು ತನ್ನ ಪ್ರಾಥಮಿಕ ವರದಿಯಲ್ಲಿ ಬ್ಯಾನರ್ಜಿಯ ಮೇಲಿನ ಯಾವುದೇ ದಾಳಿ ನಡೆದಿರುವ ಕುರಿತಾದ ಆರೋಪವನ್ನು ತಳ್ಳಿಹಾಕಿದೆ.
ನಂದಿಗ್ರಾಮ್ ನಲ್ಲಿಂದ ಮಮತಾ ಅವರು ನಾಮಪತ್ರ ಸಲ್ಲಿಸಿದ್ದಾರೆ ಮತ್ತು ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿ ಮುಖಂಡ ಸುವೆಂದು ಅಧಿಕಾರಿಯ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಟಿಎಂಸಿ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿನ್ಹಾ, ಈ ಸರ್ಕಾರ(ಬಿಜೆಪಿ) ಚುನಾವಣೆಯಲ್ಲಿ ಗೆಲ್ಲಲು ಏನು ಬೇಕಾದರೂ ಮಾಡಬಹುದು. ಮಮತಾ ಜಿ ಮೇಲಿನ ದಾಳಿಯು ನಾನು ಅವರೊಂದಿಗೆ ಕೆಲಸ ಮಾಡಲು ಬಯಕೆಯನ್ನು ಹೆಚ್ಚಿಸಿ ನಿರ್ಧಾರ ಕೈಗೊಂಡಿದ್ದೇನೆ, ಎಂದು ಹೇಳಿದರು. ದೇಶದಲ್ಲಿ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಅವರು ಹೇಳಿದರು, ಮತ್ತು ಟಿಎಂಸಿ ಮತದಾನವನ್ನು ಬಹುಮತದಿಂದ ಗೆಲ್ಲುವಂತೆ ನೋಡಿಕೊಳ್ಳುವುದು ಸಮಯದ ಅಗತ್ಯವಾಗಿದೆ, ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಈ ತಿಂಗಳಿಂದ 8 ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಶತಾಯಗತಾಯ ಪ್ರಯತ್ನ ಮಾಡುತ್ತಿರುವ ತೃಣಮೂಲ ಕಾಂಗ್ರೆಸ್ ತನ್ನ ರಾಜ್ಯ ಉಪಾಧ್ಯಕ್ಷರನ್ನಾಗಿ ಯಶವಂತ ಅವರನ್ನು ನೇಮಿಸಿದೆ.
83 ವರ್ಷ ವಯಸ್ಸಿನ ಯಶಸ್ಸಿನ ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಂದ ಎನ್ಡಿಎ ಸರ್ಕಾರದಲ್ಲಿ ವಯಸ್ಸಿನ ಆಧಾರದ ಮೇಲೆ ಅವರನ್ನು ಸರ್ಕಾರದ ಆಡಳಿತದಿಂದ ದೂರ ಇಡಲಾಗಿತ್ತು. ಹಾಗೂ ಸರ್ಕಾರದ ನಡೆಯ ವಿರುದ್ಧ ಸಿನ್ಹಾ ಅವರು ಈ ಮೊದಲು ಅನೇಕ ಬಾರಿ ಧ್ವನಿಯೆತ್ತಿದ್ದರು.