ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂಸ್
ಬೆಂಗಳೂರು : ಎರಡು ವಾರ ಸಂಪೂರ್ಣವಾಗಿ ಲಾಕ್ಡೌನ್ ಮಾಡಬೇಕು. ಇದು ನನ್ನ ಅಭಿಪ್ರಾಯ. ಪ್ರತಿನಿತ್ಯ 50 ಸಾವಿರ ಜನರಿಗೆ ಪಾಸಿಟಿವ್ ಬರ್ತಿದೆ. ಇದು ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಜನತೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ನಿಮ್ಮ ರಕ್ಷಣೆ ಜತೆಗೆ ಬೇರೆಯವರ ರಕ್ಷಣೆ ಸಹ ಮಾಡಿ ಎಂದರು.
ಲಸಿಕೆ ತಪ್ಪದೇ ಹಾಕಿಸಿಕೊಳ್ಳಿ. ಕೋವ್ಯಾಕ್ಸಿನ್ ಅಥವಾ ಕೋವಿಶಿಲ್ಡ್ ಹಾಕಿಸಿಕೊಳ್ಳಿ. ಲಸಿಕೆ ಮಾತ್ರ ಶಾಶ್ವತ ಪರಿಹಾರ. ಸರ್ಕಾರ ಎಲ್ಲರಿಗೂ ವ್ಯಾಕ್ಸಿನ್ ಕೊಡಬೇಕು. ಈಗ ವ್ಯಾಕ್ಸಿನ್ ಕೊರತೆ ಆಗಿದೆ. ಜನ ಆಕ್ಸಿಜನ್ ಕೊರತೆಯಿಂದ ಸಾಯುತ್ತಿದ್ದಾರೆ. ಆಕ್ಸಿಜನ್ ಸಕಾಲದಲ್ಲಿ ಸಿಕ್ಕರೆ ಬದುಕಿಸಬಹುದು. ಆಕ್ಸಿಜನ್ ಇಲ್ಲದೇ ದಾರಿಯಲ್ಲಿ ಬರುವಾಗ,ಆಸ್ಪತ್ರೆ
ಕಾರಿಡರ್,ರಸ್ತೆ,ಅಂಬುಲೆನ್ಸ್, ಆಟೋದಲ್ಲಿ ಸತ್ತು ಹೋದ್ರು ಅನ್ನೋ ಸುದ್ದಿ ಬರುತ್ತಿವೆ ಎಂದರು.
ಹೆಚ್ಚು ರೋಗಿಗಳು ಪತ್ತೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದೆ. ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ ಎಂಬ ಕಾರಣಕ್ಕೆ ಪರೀಕ್ಷೆಯನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರವನ್ನು ಟೀಕೆ ಮಾಡಿದ್ದಾರೆ.