ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂಸ್
ಬೆಂಗಳೂರು : ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಮಹಂತೇಶ್ ಕಾವಟಗಿಮಠ ಅವರು ಗೆದ್ದೇ ಗೆಲ್ಲುತ್ತಾರೆ. ಲಖನ್ ಅವರು ನಮ್ಮ ಪಕ್ಷದಲ್ಲಿ ಇಲ್ಲ, ಹೀಗಾಗಿ ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದಾರೆ.
ಅಲ್ಲಿನ ಬೆಳವಣಿಗೆ ಬಗ್ಗೆ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿಯವರ ಜೊತೆ ಮಾತನಾಡಿ ತಿಳಿದುಕೊಳ್ಳುತ್ತಿದ್ದೇನೆ. ರಮೇಶ್ ಜಾರಕಿಹೊಳಿಯವರು, ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದೇ ತಮ್ಮ ಗುರಿ ಎಂದು ಹೇಳಿದ್ದಾರೆ.
RELATED TOPICS:
English summary :Basavaraj bommai