Thu,Apr25,2024
ಕನ್ನಡ / English

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂಸ್

24 Nov 2021
3056

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೇರ್ ಇಂಡಿಯಾ ಸಹಯೋಗದಲ್ಲಿ 80 ಲಸಿಕಾ ದ್ವಿಚಕ್ರ ವಾಹನ ಹಾಗೂ 16 ಮೊಬೈಲ್(ನಾಲ್ಕು ಚಕ್ರ ವಾಹನ) "ಲಸಿಕೆ ವಾಹನ"ಗಳಿಗೆ ಇಂದು ಮುಖ್ಯ ಆಯುಕ್ತ ಗೌರವ್ ಗುಪ್ತ ರವರು ಚಾಲನೆ ನೀಡಿದರು.

ಪ್ರತಿ ವಲಯಕ್ಕೆ 8 ದ್ವಿಚಕ್ರ ವಾಹನಗಳು ಹಾಗೂ 2 ಮೊಬೈಲ್(ನಾಲ್ಕು ಚಕ್ರ ವಾಹನ) ಸೇರಿದಂತೆ ಒಟ್ಟು 80 ದ್ವಿಚಕ್ರ ವಾಹನ ಹಾಗೂ 16 ಮೊಬೈಲ್(ನಾಲ್ಕು ಚಕ್ರ ವಾಹನ) ವಾಹನಗಳು ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಲಸಿಕೆ ನೀಡಲು ಹೋಗುವ ಆರೋಗ್ಯ ಸಿಬ್ಬಂದಿಯ ಜೊತೆ ಕಾರ್ಯನಿರ್ವಹಿಸಲಿದ್ದಾರೆ.

ನಗರದಲ್ಲಿ ಇದುವರೆಗೆ ಒಟ್ಟು 1,36,99,018 ಡೋಸ್ ಲಸಿಕೆ ನೀಡಲಾಗಿದ್ದು, 80,57,563 ಮೊದಲ ಡೋಸ್(ಶೇ. 88 ರಷ್ಟು), 56,41,455 ಎರಡನೇ ಡೋಸ್(ಶೇ. 62 ರಷ್ಟು) ಲಸಿಕೆಯನ್ನು ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಹಾಗೂ ಯಲಹಂಕದ ಡಾ. ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಮಲ್ಲೇಶ್ವರದ ಯಂಗ್‌ಸ್ಟರ್ಸ್ ಕಬ್ಬಡಿ ಆಟದ ಮೈದಾನದಲ್ಲಿ ಸ್ಥಾಪಿಸಿರುವ ಬೃಹತ್ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ವಾಕ್ ಇನ್ ಹಾಗೂ ಡ್ರೈವ್ ಇನ್ ಮೂಲಕ ವಾಹನಗಳಲ್ಲೇ ಲಸಿಕೆ ಪಡೆಯುವ ವ್ಯವಸ್ಥೆ ಮಾಡಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಲಸಿಕಾಕರಣ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತಿದೆ. ನಗರದಲ್ಲಿ ಮೊದಲನೇ ಡೋಸ್ ಲಸಿಕೆ ಪಡೆದು ಎರಡನೇ ಡೋಸ್ ಲಸಿಕೆ ಪಡೆಯದಿರುವವರ ಪಟ್ಟಿಯನ್ನು ಕೋವಿನ್ ಪೋರ್ಟಲ್ ನಿಂದ ಪಡೆದುಕೊಂಡಿದ್ದು, ಎರಡನೇ ಡೋಸ್ ಲಸಿಕೆ ಪಡೆಯದವರಿಗೆ ದೂರವಾಣಿ ಮೂಲಕ ಕರೆ ಮಾಡಿ ಎರಡನೇ ಡೋಸ್ ಲಸಿಕೆ ಪಡೆಯಲು ತಿಳಿಸಲಾಗುತ್ತಿದೆ.

ವಾರ್ಡ್ ವಾರು ಆರೋಗ್ಯ ತಂಡದಿಂದ ಲಸಿಕಾಕರಣ ಕಾರ್ಯ:
ಲಸಿಕಾಕರಣ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ 10 ದಿನಗಳಿಂದ ಪಾಲಿಕೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ, ಆಯಾ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಯು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಒಂದು ವಾರ್ಡ್ ನಲ್ಲಿ ಬರುವ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ಪಡೆದಿರುವ ಬಗ್ಗೆ ಖಾತರಿಪಡಿಸಿಕೊಂಡು ಲಸಿಕೆ ಪಡೆಯದವರಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ. ಅದರಂತೆ ಇದುವರೆಗೆ ಸುಮಾರು 70 ವಾರ್ಡ್ ಗಳಲ್ಲಿ ಆರೋಗ್ಯ ತಂಡವು ಭೇಟಿ ನೀಡಿದ್ದು, ಮೊದಲ ಮತ್ತು ಎರಡನೇ ಡೋಸ್ ಸೇರಿ ಸುಮಾರು 35,000 ಮಂದಿಗೆ ಲಸಿಕೆ ನೀಡಲಾಗಿರುತ್ತದೆ. ಇದೇ ವೇಳೆ ಮತದಾರರ ಪಟ್ಟಿ ಅನುಸಾರ ಮನೆಯಲ್ಲಿ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದಿದ್ದಾರೆಯೇ ಎಂಬುದನ್ನು ಖಾತರಿಪಡಿಸಿಕೊಂಡು ಲಸಿಕೆ ಪಡೆಯದವರಿಗೆ ಲಸಿಕೆ ನೀಡುವ ಕೆಲಸ ಮಾಡಲಾಗುತ್ತಿದೆ.

ಈ ವೇಳೆ ವಿಶೇಷ ಆಯುಕ್ತರು(ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

RELATED TOPICS:
English summary :Vaccine vehicle flagged off by BBMP Chief commissioner

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...