ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂಸ್
ಶಿವಮೊಗ್ಗ : ಚಲಿಸುತ್ತಿದ್ದ ಕಾರ್ ಗೆ ಬೆಂಕಿ ತಗುಲಿದ ಧಗಧಗನೆ ಹೊತ್ತಿ ಉರಿದ ಘಟನೆ ಆಗುಂಬೆ ಘಾಟಿಯ ಮೊದಲನೇ ತಿರುವಿನಲ್ಲಿ ನಡೆದಿದೆ. ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿ ಮನೆಗೆ ತರುವ ವೇಳೆಯ ಅಗ್ನಿ ಅವಘಡ ಸಂಭವಿಸಿ ಸುಟ್ಟು ಭಸ್ಮವಾದ ಘಟನೆ ಸಂಭವಿಸಿದೆ.
ಶಿವಮೊಗ್ಗದ ಅರವಿಂದ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಮೂವರು ಪ್ರಯಾಣಿಸುತ್ತಿದ್ದರು. ಕಾರ್ಕಳದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಆಗುಂಬೆ ಘಾಟಿಯ ಮೊದಲನೇ ತಿರುವಿನಲ್ಲಿ ಕಾರಿನ ಇಂಜಿನ್ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣೆವೇ ಮೂವರು ಕಾರ್ ನಿಂದ ಇಳಿದು ಪಾರಾಗಿದ್ದಾರೆ.
ನೋಡುತ್ತಿದ್ದಂತೆ ಬೆಂಕಿ ಇಡೀ ಗಡಿಯನ್ನೇ ಆವರಿಸಿ ಸುಟ್ಟು ಕರಕಲಾಗಿದೆ, ಕಾರಿನಲ್ಲಿದ್ದವರು ಕೂಡಲೇ ಕೆಳಗೆ ಇಳಿದ ಪರಿಣಾಮ ಹೆಚ್ಚಿನ ಅವಘಡ ತಪ್ಪಿದೆ. ಘಟನಾ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.