ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್ನಿಂದ ಹಲ್ಲೆ | ಜನತಾ ನ್ಯೂಸ್
ಮಂಗಳೂರು : ನಗರದ ಕರಂಗಲಪಾಡಿ ಬಳಿ ಸರ್ಕಾರಿ ಕಚೇರಿಯಲ್ಲಿ ದುಷ್ಕರ್ಮಿಗಳಿಂದ ದಾಳಿ ನಡೆದಿರುವ ದುರ್ಘಟನೆ ನಡೆದಿದೆ. ಮೂವರು ಮಹಿಳೆಯರ ಮೇಲೆ ತಲ್ವಾರ್ನಿಂದ ದಾಳಿ ನಡೆಸಿದ್ದಾರೆ.
ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರಕ್ಕೆ ನುಗ್ಗಿದ ತರಬೇತಿ ಕೇಂದ್ರದ ಯುವಕ ಮೂವರು ಮಹಿಳಾ ಸಿಬ್ಬಂದಿಗಳ ಮೇಲೆ ಯದ್ವಾತದ್ವಾ ತಲ್ವಾರ್ ಬೀಸಿದ್ದಾನೆ.
ಗಿಫ್ಟ್ ಕೊಡುವುದಕ್ಕೆ ಇದೆ ಅಂತಾ ಬ್ಯಾಗ್ನಿಂದ ತಲ್ವಾರ್ ಎತ್ತಿದ ವ್ಯಕ್ತಿ ಅಲ್ಲಿದ್ದ ಮೂವರ ಮೇಲೆ ತಲ್ವಾರ್ ಬೀಸಿದ್ದಾನೆ. ಸ್ಟೆನೋಗ್ರಾಫರ್ ನಿರ್ಮಲಾ(43) ಎಂಬುವವರ ತಲೆ ಮತ್ತು ಕೈಗೆ ಗಂಭೀರ ಗಾಯಗಳಾಗಿವೆ. ಪ್ರಥಮ ದರ್ಜೆ ಸಹಾಯಕಿ ರೀನಾ ರಾಯ್(45), ಅಟೆಂಡರ್ ಗುಣವತಿ (58) ಮೇಲೆ ತಲ್ವಾರ್ನಿಂದ ದಾಳಿ ಮಾಡಿದ್ದು, ಆರೋಪಿಯ ದಾಳಿಯಿಂದ ಮಹಿಳೆಯರ ತಲೆ, ಕೈ, ಬೆನ್ನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಆ ಪೈಕಿ ನಿರ್ಮಲಾ ಎಂಬವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ 31 ವರ್ಷದ ನವೀನ್ ಅಂತಾ ಗುರುತಿಸಲಾಗಿದೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, ಪೊಲೀಸ್ ಉಪ ಆಯುಕ್ತ ಹರಿರಾಂ ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.