ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಸೋಮವಾರ 677 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 24 ಜನರು ಸೋಂಕಿಗೆ ಬಲಿಯಾಗಿದ್ದು, 1,678 ಜನರು ಗುಣಮುಖರಾಗಿದ್ದಾರೆ.
ಸದ್ಯ ಪಾಸಿಟಿವಿಟಿ ದರ ಶೇ.0.60 ರಷ್ಟಿದೆ. ಇನ್ನು1678 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 29,16,530 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ 14,358 ರಷ್ಟು ಸಕ್ರಿಯ ಪ್ರಕರಣಗಳು ಇವೆ.24 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,627 ಕ್ಕೆ ಏರಿದೆ.
ರಾಜಧಾನಿಯಲ್ಲಿ ಸೋಮವಾರದಂದು 213 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 7 ಜನರು ಸೋಂಕಿಗೆ ಬಲಿಯಾಗಿದ್ದಾರೆ.
24 ಸೋಂಕಿತರು ಬಲಿ:
ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 7, ಚಿತ್ರದುರ್ಗ 1, ದಕ್ಷಿಣ ಕನ್ನಡ 2, ಧಾರವಾಡ 1, ಹಾಸನ 3, ಕೋಲಾರ 1, ಉಡುಪಿ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ 677 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 213, ಬೀದರ್ 1, ಚಾಮರಾಜನಗರ 5, ಚಿಕ್ಕಮಗಳೂರು 35, ಚಿತ್ರದುರ್ಗ 4, ದಕ್ಷಿಣ ಕನ್ನಡ 102, ದಾವಣಗೆರೆ 3, ಧಾರವಾಡ 5, ಗದಗ 2, ಹಾಸನ 37, ಕಲಬುರಗಿ 3, ಕೊಡಗು 29, ಕೋಲಾರ 23, ಮಂಡ್ಯ 5, ಮೈಸೂರು 37, ಶಿವಮೊಗ್ಗ 7, ತುಮಕೂರು 26, ಉಡುಪಿ 63, ಉತ್ತರ ಕನ್ನಡ ಜಿಲ್ಲೆಯಲ್ಲಿ 41 ಪ್ರಕರಣ ಪತ್ತೆಯಾಗಿದೆ.