ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂಸ್
ಬೆಂಗಳೂರು : ನಗರದ ಚಾಮರಾಜಪೇಟೆಯಲ್ಲಿರುವ ಖಾಸಗಿ ಸಾರಿಗೆ ಸಂಸ್ಥೆಯೊಂದರ ಗೋದಾಮಿನ ಬಳಿ ಇಂದು ಗುರುವಾರ ಮಧ್ಯಾಹ್ನ ಭಾರಿ ಸ್ಪೋಟ ಸಂಭವಿಸಿದೆ.
ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ಸಿಕ್ಕ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಸಫಲವಾಗಿದೆ.
ಸ್ಪೋಟದಿಂದ ಕೆಲಕಾಲ ಸ್ಥಳೀಯ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆರಂಭದಲ್ಲಿ ಏರ್ ಕಂಪ್ರೆಸರ್ ಸ್ಪೋಟಕ್ಕೆ ಕಾರಣ ಎನ್ನಲಾಗಿದ್ದು, ಬಳಿಕ ಇದು ಪಟಾಕಿಗಳ ಸ್ಫೋಟವೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳದಲ್ಲಿ ಸುಮಾರು ಸಾಕಷ್ಟು ಪೆಟ್ಟಿಗೆಗಳನ್ನು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.
ಸಧ್ಯಕ್ಕೆ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಕೂಡ ಘಟನಾ ಸ್ಥಳಕ್ಕೆ ದಾವಿಸಲಿದ್ದು ತನಿಖೆಯ ಬಳಿಕ ನಿಜಾಂಶ ಬೆಳಕಿಗೆ ಬರಬೇಕಿದೆ.