15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡ ಪ್ರಧಾನಿ ಮೋದಿ : ಪಂಜಾಬ್ ಸರ್ಕಾರದಿಂದ ಭಾರಿ ಭದ್ರತಾ ಲೋಪ - ಗೃ.ಸ. | ಜನತಾ ನ್ಯೂಸ್
ನವದೆಹಲಿ : ದೇಶದ ಪ್ರಧಾನಿ ಪೋಲೀಸರ ಭದ್ರತಾ ಲೋಪದಿಂದ 20ನಿಮಿಷಗಳ ಕಾಲ ಫ್ಲೈಓವರ್ ಮೇಲೆ 20 ನಿಮಿಷಗಳ ಕಾಲ ಸಿಲುಕಿಕೊಂಡ ಆತಂಕಕಾರಿ ಘಟನೆ ಪಂಜಾಬ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಪಂಜಾಬ್ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಗದಲ್ಲಿ ಪೊಲೀಸರು ಸೂಕ್ತ ಭದ್ರತೆ ಒದಗಿಸಿದ ಕಾರಣದಿಂದ ಕೆಲವು ಪ್ರತಿಭಟನಾಕಾರರು ರಸ್ತೆಯ ಮದ್ಯೆ ಜಮಾಯಿಸಿದ್ದು, ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡ ಪ್ರಧಾನ ಮಂತ್ರಿಯವರು, ಪ್ರವಾಸವನ್ನು ಮೊಟಕುಗೊಳಿಸಿ ಹಿಂತಿರುಗಿದ್ದಾರೆ.
ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಗೃಹ ಮಂತ್ರಾಲಯ, ಇದು ದೊಡ್ಡ ಭದ್ರತಾ ಲೋಪವಾಗಿದೆ, ಎಂದು ಹೇಳಿದೆ.
ಭದ್ರತಾಲೋಪದ ಕಾರಣದಿಂದ ಪ್ರಧಾನಿ ಮೋದಿಯವರು ಸಾವಿರಾರು ಕೋಟಿ ರೂಪಾಯಿ ಯೋಜನೆಗಳಿಗೆ ಚಾಲನೆ ನೀಡಬೇಕಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸದೆ ವಿಮಾನ ನಿಲ್ದಾಣಕ್ಕೆ ಮರಳಿದ್ದಾರೆ, ಎನ್ನಲಾಗಿದೆ.
ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಪ್ರಧಾನಿ ಬಟಿಂಡಾಗೆ ಬಂದಿಳಿದರು. ಅವರನ್ನು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಕರೆದೊಯ್ಯಬೇಕಾಗಿತ್ತು ಆದರೆ ಮಳೆ ಮತ್ತು ಕಳಪೆ ಗೋಚರತೆಯ ಕಾರಣ, ಅವರು ಹವಾಮಾನ ಸರಿಯಾಗುವುದೆಂದು ಸುಮಾರು 20 ನಿಮಿಷಗಳ ಕಾಲ ಕಾದಿದ್ದಾರೆ.
ಹವಾಮಾನವು ಸುಧಾರಿಸದಿದ್ದಾಗ, ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಪ್ರಧಾನಿ ಅವರು ರಸ್ತೆಯ ಮೂಲಕ ಭೇಟಿ ನೀಡಬಹುದೆಂದು ನಿರ್ಧರಿಸಲಾಯಿತು, ಇದು 2 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಪಂಜಾಬ್ ಪೊಲೀಸ ಡಿಜಿಪಿ ರಿಂದ ಅಗತ್ಯ ಭದ್ರತಾ ವ್ಯವಸ್ಥೆಗಳ ಅಗತ್ಯ ದೃಢೀಕರಣ ಪಡೆದ ನಂತರವೇ ಪ್ರಧಾನಿಯವರ ರಸ್ತೆ ಮೂಲಕ ಪ್ರಯಾಣ ಪ್ರಾರಂಭಿಸಲಾಗಿದೆ.
ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿ, ಪ್ರಧಾನಿ ಬೆಂಗಾವಲು ಪಡೆ ಮೇಲ್ಸೇತುವೆಯನ್ನು ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿರುವುದು ಕಂಡುಬಂದಿದೆ. ಪ್ರಧಾನಿಯವರು 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು. ಇದು ಪ್ರಧಾನಿಯವರ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ, ಎಂದು ಕೇಂದ್ರ ಗೃಹ ಮಂತ್ರಾಲಯ ಹೇಳಿದೆ.
ಪ್ರಧಾನಮಂತ್ರಿಯವರ ವೇಳಾಪಟ್ಟಿ ಮತ್ತು ಪ್ರಯಾಣದ ಯೋಜನೆಯನ್ನು ಪಂಜಾಬ್ ಸರ್ಕಾರಕ್ಕೆ ಮುಂಚಿತವಾಗಿ ತಿಳಿಸಲಾಯಿತು. ಕಾರ್ಯವಿಧಾನದ ಪ್ರಕಾರ, ಅವರು(ರಾಜ್ಯ ಸರ್ಕಾರ) ಸಂಚಾರ, ಭದ್ರತೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು ಮತ್ತು ಆಕಸ್ಮಿಕ ಯೋಜನೆಯನ್ನೂ ಸಿದ್ಧಪಡಿಸಬೇಕು. ಆಕಸ್ಮಿಕ ಯೋಜನೆಯ ದೃಷ್ಟಿಯಿಂದ ಪಂಜಾಬ್ ಸರ್ಕಾರವು ರಸ್ತೆಯ ಮೂಲಕ ಎಲ್ಲಾ ರೀತಿಯ ಚಲನೆಯನ್ನು ಸುರಕ್ಷಿತವಾಗಿ ಯೋಜಿಸಲು ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಬೇಕಾಗಿತ್ತು. ಆದರೆ, ಭದ್ರತೆಯನ್ನು ನಿಯೋಜಿಸಲಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಭದ್ರತಾ ಲೋಪದ ನಂತರ, ಬಟಿಂಡಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಲು ನಿರ್ಧರಿಸಲಾಯಿತು, ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಡಿಡಿ ನ್ಯೂಸ್ ಟ್ವೀಟ್ ಮಾಡಿರುವ ಚಿತ್ರದಲ್ಲಿ ಪ್ರಧಾನಿಯವರ ಮಾರ್ಗಕ್ಕೆ ಅಡ್ಡವಾಗಿ ಬಸ್ ಸೇರಿದಂತೆ ಇತರೆ ವಾಹನಗಳನ್ನು ನಿಯಮದ ವಿರುದ್ಧ ದಿಕ್ಕಿನಲ್ಲಿ ನಿಲ್ಲಿಸಿರುವುದು ಕಂಡು ಬರುತ್ತದೆ.
ಈ ಗಂಭೀರ ಭದ್ರತಾ ಲೋಪವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರದಿಂದ ವಿವರವಾದ ವರದಿಯನ್ನು ಕೇಳಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಈ ಲೋಪದ ಹೊಣೆಗಾರಿಕೆಯನ್ನು ನಿಗದಿಪಡಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೂ ಕೇಳಲಾಗಿದೆ.