ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂಸ್
ಶ್ರೀರಂಗಪಟ್ಟಣ : ಬಾಬರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿಯನ್ನೂ ಒಡೆದು ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜೆಎಂಎಫ್ಸಿ ಕೋರ್ಟ್ ಮಂಗಳವಾರ ಆದೇಶಿಸಿದೆ.
ಈ ಮಸೀದಿಯಲ್ಲಿ ಅದ್ಬುತವಾದ ಶಿಲೆಗಳಿದೆ. ಅದು ದೇವಸ್ಥಾನದ ಕಟ್ಟಡವಾಗಿದೆ. ಶ್ರೀರಂಗಪಟ್ಟಣದ ದೇವಾಸ್ಥಾನವನ್ನು ಮಸೀದಿ ಮಾಡಿಕೊಂಡಿದ್ದಾರೆ. ಹಿಂದೂಗಳು ಜಾಗರೂಕರಾಗಿ. ಅತಿಬೇಗ ಒಡೆಯಬೇಕಾದ ಮಸೀದಿ ಇದು ಎಂದು ಸಾಮಾಜಿಕ ಜಾಲತಾಣದಲ್ಲಿ ಋಷಿಕುಮಾರ ಹೇಳಿಕೊಂಡಿದ್ದಾರೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ನಮ್ಮಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ಅಸ್ಥಿ ವಿಸರ್ಜನೆ ನಿಮಿತ್ತ ಭಾನುವಾರ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದ ಋಷಿ ಕುಮಾರಸ್ವಾಮಿ, ಮಸೀದಿ ಮುಂಭಾಗದಲ್ಲೇ ನಿಂತು ವಿಡಿಯೋ ಚಿತ್ರೀಕರಣ ನಡೆಸಿ, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದಾರೆ. ವಿಡಿಯೋ ವೈರಲ್ ಆಗಿದೆ.