ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ | JANATA NEWS
ಮೈಸೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮರಳಿ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಬಗ್ಗೆ ಖುದ್ದು ಸಚಿವೆ ಸ್ಪಷ್ಟನೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಹರಡುತ್ತಿರುವ ಸುದ್ದಿಗಳಿಗೂ ನನಗೂ ಸಂಬಂಧವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಈಗಾಗಲೇ ನಮ್ಮ ಕೇಂದ್ರದ ನಾಯಕರು ಸಚಿವೆಯನ್ನಾಗಿ ಮಾಡಿದ್ದಾರೆ. ದೇಶದಾದ್ಯಂತ ಪ್ರವಾಸ ಮಾಡುವಂತಹ ಅವಕಾಶ ನನಗೆ ಸಿಕ್ಕಿದೆ. ನಾನೇ ನೋಡಿರದ ಹಲವು ರಾಜ್ಯಗಳನ್ನು ನೋಡಿದ್ದೇನೆ.. ಇಂತಹ ಒಳ್ಳೆಯ ಅವಕಾಶ ಸಿಕ್ಕಿರುವಂತಹ ಈ ಸಂದರ್ಭದಲ್ಲಿ ನಾನು ಬೇರೆ ಯಾವ ಯೋಚನೆಯನ್ನೂ ಮಾಡಿಲ್ಲ.
ಏನೇ ಊಹಾಪೋಹ ಸುದ್ದಿಗಳು ಹರಿದಾಡುತ್ತಿದ್ದರೂ, ಖಂಡಿತವಾಗಿಯೂ ನನಗೆ ಆ ಬಗ್ಗೆ ಮಾಹಿತಿಯಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ವಿಚಾರದ ಬಗ್ಗೆ ಸ್ಪಷ್ಟನೆಯನ್ನು ನೀಡಿದರು.
ಸಿದ್ದರಾಮಯ್ಯರ ಗೋಮುಖ ವ್ಯಾಘ್ರತನ ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಮೈಸೂರಿನ ಅಭಿವೃದ್ಧಿಗೆ ಅವರ ಕೊಡುಗೆ ಏನು ಎಂದು ಅವರು ಎದೆ ಮುಟ್ಟಿಕೊಂಡು ಹೇಳಲಿ. ಐದು ವರ್ಷದ ಆಡಳಿತದಲ್ಲಿ ಒಂದು ಅಭಿವೃದ್ಧಿ ನಿರ್ಧಾರಗಳನ್ನ ಕೈಗೊಳ್ಳಲಿಲ್ಲ. ಲಿಂಗಾಯತರನ್ನ ಒಡೆಯುವುದು, ಹಿಂದುಳಿದ ಜಾತಿಯನ್ನು ಒಡೆಯುವುದು ಅವರು ಮಾಡಿದ ಅಭಿವೃದ್ಧಿ ಕಾರ್ಯ. ಅಂದು ಕೆಲಸ ಮಾಡದವರು ಮುಂದೆ ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ಪೈಪೋಟಿ ನಡೆಯುತ್ತಿದೆ. ಈ ಕಾರಣದಿಂದಾಗಿ ಇಬ್ಬರೂ ನಾಯಕರು ಭಯದಿಂದ ಬಾಯಿಗೆ ಬಂದಂತೆ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಶೋಭಾ ಅಭಿಪ್ರಾಯ ಪಟ್ಟರು.