Sun,May19,2024
ಕನ್ನಡ / English

ಮಾದಕ ದ್ರವ್ಯದಿಂದ ಸರ್ಕಾರ ನಡೆಸುತ್ತಿದ್ದರು ಹೇಳಿಕೆ: ನಳಿನ್ ಕುಮಾರ್‌ಗೆ ಏನೋ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು: ಡಿಕೆಶಿ | Janata news

28 Nov 2020
936

ಕಾರವಾರ: : ಸಿದ್ದರಾಮಯ್ಯ ಅವರು ಮಾದಕ ದ್ರವ್ಯದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಶಿರಸಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಭಾಗವಹಿಸಲು ಶನಿವಾರ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿ, ನಳೀನ್​ ಕುಮಾರ್ ಕಟೀಲ್​ಗೆ ಏನೋ ಹೆಚ್ಚು ಕಡಿಮೆಯಾಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಬೇಕು. ನಾನು ಕೂಡ ಅದೇ ಸರ್ಕಾರದಲ್ಲಿದ್ದೆ. ಸರ್ಕಾರವನ್ನು ಮಾದಕ ದ್ರವ್ಯದಿಂದ ನಡೆಸುತ್ತಿದ್ದಾರೆ ಎಂದಾದರೆ ಇವರು ಎಫ್‌ಐಆರ್ ಏಕೆ ಮಾಡಿಲ್ಲ. ಯಾವುದೋ ಸಣ್ಣಪುಟ್ಟ ನಟಿಯರನ್ನು ಹಿಡಿದಿದ್ದಾರಷ್ಟೆ ಎಂದರು.

ಸಿದ್ದರಾಮಯ್ಯ ಅವರು 5 ವರ್ಷ ಮಾದಕ ದ್ರವ್ಯದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರು ಎಂಬುದು ಸತ್ಯವೇ ಆಗಿದ್ದರೆ, ಎಫ್‌ಐಆರ್ ದಾಖಲಿಸಲಿಲ್ಲವೇಕೆ? ನಳಿನ್ ಕುಮಾರ್ ಕಟೀಲ್ ಅವರಿಗೆ ಏನೋ ಹೆಚ್ಚು ಕಮ್ಮಿ ಆಗಿದೆ. ಆಸ್ಪತ್ರೆಗೆ ಸೇರಿಸಬೇಕು. ಅವರ ಹೇಳಿಕೆ ಅವರಿಗೇ ಅರ್ಥವಾಗಬೇಕು ಎಂದು ಹೇಳಿದ್ದಾರೆ.

ಯಾರೋ ಸಣ್ಣ ನಟಿಯರನ್ನು ಜೈಲಿಗೆ ಹಾಕಿದ್ದಾರೆ. ನಾನು ಸರ್ಕಾರದಲ್ಲಿ ಇದ್ದವನೇ. ಅವರು ಎಫ್‌ಐಆರ್ ಹಾಕಲಿ ನೋಡೋ. ನಮ್ಮಲ್ಲಿ ಇದ್ದ ಸಾಕಷ್ಟು ನಾಯಕರು ಅವರ ಸರ್ಕಾರದಲ್ಲಿ ಇದ್ದಾರಲ್ಲವೇ... ಅವರ ಮೇಲೂ ದೂರು ದಾಖಲು ಮಾಡಲಿ ಎಂದು ಸವಾಲೆಸೆದಿದ್ದಾರೆ.

ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ.ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಬಂದ ಹಾಗೆ ಆಗುತ್ತದೆ ಎಂದರು.

RELATED TOPICS:
English summary :DKShivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...