ತಹಸೀಲ್ದಾರ್ ಪತ್ನಿ ಅನುಮಾನಸ್ಪದ ಸಾವು! | Janata news
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಂತ ಎಸ್.ಬಿ.ಕೂಡಲಗಿ ಅವರ ಪತ್ನಿ ಶಂಕ್ರಮ್ಮ ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಹಸೀಲ್ದಾರ್ ಸತೀಶ(ಸಾಯಿಬಣ್ಣ) ಬಿ.ಕೂಡ್ಲಿಗಿ ಅವರ ಪತ್ನಿ ಶಂಕ್ರಮ್ಮ ಮೃತ ದುರ್ದೈವಿ. ಸಿರಗುಪ್ಪ ತಾಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಂತ ಎಸ್.ಬಿ.ಕೂಡಲಗಿ ಅವರಿಗೆ, ಇತ್ತೀಚೆಗೆ ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಳಿಸಲಾಗುತ್ತು. ಆದರೆ, ಸರ್ಕಾರಿ ನಿವಾಸವನ್ನು ಖಾಲಿ ಮಾಡಿರಲಿಲ್ಲ.
ಇದರಿಂದ ಮನನೊಂದು ಅವರ ಪತ್ನಿ ಶಂಕ್ರಮ್ಮ(50) ಅವರು ಸರ್ಕಾರಿ ವಸತಿ ಗೃಹದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಶಂಕ್ರಮ್ಮ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಅನುಮಾನಸ್ಪದವಾಗಿ ತಹಸೀಲ್ದಾರ್ ಪತ್ನಿ ಮೃತಪಟ್ಟಿದ್ದು, ಸಿರಗುಪ್ಪ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.