ರಾಜ್ಯ ಸಚಿವ ಸಂಪುಟ: ಬಿಎಸ್ವೈ ಸಂಪುಟಕ್ಕೆ ಏಳು ಸಚಿವರ ಸೇರ್ಪಡೆ! | Janata news
ಬೆಂಗಳೂರು : ರಾಜ್ಯದಲ್ಲಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಬುಧವಾರ ಮಧ್ಯಾಹ್ನ ರಾಜಭವನದಲ್ಲಿ ನಡೆಯಿತು. ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿದ್ದಾರೆ. ಇಬ್ಬರು ವಲಸಿಗರು ಹಾಗೂ ನಾಲ್ವರು ಮೂಲನಿವಾಸಿಗಳು ಸೇರಿದಂತೆ ಒಟ್ಟು 7 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.
ರಾಜಭವನದಲ್ಲಿ ಸರಳ ವಾಗಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಏಳು ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಎಸ್. ಅಂಗಾರ, ಅರವಿಂದ ಲಿಂಬಾವಳಿ, ಸಿ.ಪಿ ಯೋಗೇಶ್ವರ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಆರ್. ಶಂಕರ್ ಹಾಗೂ ಎಂಟಿಬಿ ನಾಗರಾಜ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
RELATED TOPICS:
English summary :Cabinet Expansion New Ministers Oath Taking Ceremony