ಕಾಂಗ್ರೆಸ್ ಅಧಿಕಾರ ಇಲ್ಲದಾಗ ಅಶಾಂತಿ, ಗಲಭೆ ಸೃಷ್ಠಿಸುತ್ತಿದೆ, ರೈತರ ಹೆಸರಿನಲ್ಲಿ ರಾಷ್ಟ್ರಘಾತಕ ಶಕ್ತಿಗಳ ಕೃತ್ಯ ನಡೆದಿದೆ: ನಳೀನ್ ಕುಮಾರ್ ಕಟೀಲ್ | Janata news
ಚಿತ್ರದುರ್ಗ : ರೈತರ ಹೆಸರಿನಲ್ಲಿ ರಾಜಕೀಯ, ಪುಂಡಾಟ ಸರಿಯಲ್ಲ. ದಾಂಧಲೆ ಮಾಡುವುದು ರೈತ, ದೇಶಭಕ್ತ ಮಾಡುವ ಕಾರ್ಯವಲ್ಲ. ರೈತರ ಹೆಸರಿನಲ್ಲಿ ರಾಷ್ಟ್ರಘಾತಕ ಶಕ್ತಿಗಳ ಕೃತ್ಯ ನಡೆದಿದೆ ಎಂದು ಬಿಜೆಪಿ ರಾಜ್ಯದ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕೆಂಪುಕೋಟೆ ಮೇಲೆ ದಾಳಿ, ರಾಷ್ಟ್ರಧ್ವಜ ಕೀಳುವುದು ಸರಿಯಲ್ಲ. ಕೆಲ ರಾಜಕೀಯ ಪಕ್ಷ ರೈತರ ದಿಕ್ಕು ತಪ್ಪಿಸಿವೆ. ದೆಹಲಿ ದಾಂಧಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು. ದೇಶದ ರೈತರು ಈ ಬಗ್ಗೆ ಗಮನ ಹರಿಸಬೇಕು.
ಅಧಿಕಾರ ಇಲ್ಲದಾಗ ಕಾಂಗ್ರೆಸ್ ಪಕ್ಷದಿಂದ ಬೆಂಕಿ ಹಚ್ಚುವ ಕಾರ್ಯವಾಗುತ್ತಿದೆ, ಕಾಂಗ್ರೆಸ್ ಅಧಿಕಾರವಿದ್ದಾಗ ವಿಪಕ್ಷಗಳ ಮಣಿಸುವ ನೀತಿ ಅನುಸರಿಸಿತ್ತು. ಕಾಂಗ್ರೆಸ್ ಅಧಿಕಾರ ಇಲ್ಲದಾಗ ಅಶಾಂತಿ , ಗಲಭೆ ಸೃಷ್ಠಿಸುತ್ತಿದೆ ಎಂದು ಕಿಡಿಕಾರಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಶೀಘ್ರ ರಾಜಕೀಯ ಅಂತ್ಯ ಕಾಣಲಿದ್ದಾರೆ. ಮೊನ್ನೆ ಜೈಲಿಂದ ಬಂದಾಗ ಡಿಕೆಶಿ ಮೆರವಣಿಗೆ ಮೂಲಕ ಬಂದಿದ್ದಾರೆ. ಮತ್ತೆ ಡಿಕೆಶಿ ಅಲ್ಲಿಗೆ ಹೋಗುತ್ತಾರೆ ಎಂದು ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.