ರಾಮನಗರದಲ್ಲಿ ಆರ್ಬಿಐ ಬ್ಯಾಂಕ್ನಿಂದ ಹಣ ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್ ಪಲ್ಟಿ | Janata news
ರಾಮನಗರ : ಆರ್ಬಿಐ ಬ್ಯಾಂಕ್ನಿಂದ ಹಣ ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್ ಬಿಡದಿಯ ಕಲ್ಲುಗೋಪಹಳ್ಳಿ ಬಳಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.
ಗುರುವಾರ ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕಲ್ಲುಗೋಪಹಳ್ಳಿ ಬಳಿ ಕಂಟೇನರ್ ಲಾರಿ ಪಲ್ಪಿಯಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.
ಸುಮಾರು 18 ಕಂಟೇನರ್ಗಳು ಗುರುವಾರ ಮಧ್ಯಾಹ್ನ ಮೈಸೂರಿನಿಂದ ಬೆಂಗಳೂರಿಗೆ ಹಣ ತುಂಬಿಕೊಂಡು ಸಿಐಎಸ್ಎಫ್ ಪೊಲೀಸರ ಭದ್ರತೆಯಲ್ಲಿ ಹೋಗುತ್ತಿದ್ದವು. ಮಾರ್ಗಮಧ್ಯೆ ಕಲ್ಲುಗೋಪಹಳ್ಳಿ ಬಳಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರಿಂದ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಂಟೇನರ್ ಪಲ್ಟಿಯಾಗಿದೆ.
ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಬಿಡದಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನಿಂದ ಇದೀಗ ಆರ್ಬಿಐ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಕ್ರೇನ್ ಮೂಲಕ ಕಂಟೇನರ್ ಮೇಲೆತ್ತುವ ಕೆಲಸ ನಡೆಯಲಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯೋಧರು ಭದ್ರತೆ ನೀಡುತ್ತಿದ್ದಾರೆ.