ಮದ್ವೆ ಆದ 2 ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ! | Janata news
ಧಾರವಾಡ: : ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಮ್ಮಿಗಟ್ಟಿಯಲ್ಲಿ ಸಂಭವಿಸಿದೆ.
ಮೃತಳು ರಂಜಿತಾ ಹಂಚಿನಮನಿ (19) ಎಂದು ಗುರುತಿಸಲಾಗಿದೆ. ಮುಮ್ಮಿಗಟ್ಟಿ ಗ್ರಾಮದ ಮಂಜುನಾಥ ಹಂಚಿನಮನಿ ಎಂಬಾತನೊಂದಿಗೆ ರಂಜಿತಾ ಕಳೆದ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.
ರಂಜಿತಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಗಳು ಸತ್ತಿದ್ದಾಳೆ ಎಂದು ರಂಜಿತಾಳ ಪಾಲಕರು ಆರೋಪಿಸಿದ್ದಾರೆ.
ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Dharwad