ಕರ್ತವ್ಯ ನಿರತ ಪಿಎಸ್ಐ ಮೇಲೆ ಲಾಂಗ್ನಿಂದ ಮಾರಣಾಂತಿಕ ಹಲ್ಲೆ! | Janata news
ಕೋಲಾರ : ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಬಂಧಿಸಲು ಕೋಲಾರಕ್ಕೆ ತೆರಳಿದಾಗ ಆರೋಪಿ ಪಿಎಸ್ಐ ಮೇಲೆಯೇ ಲಾಂಗ್ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಅಪ್ಟೆನ್ ಹಲ್ಲೆ ಮಾಡಿದ ಆರೋಪಿ. ಮಹದೇವಪುರ ಠಾಣೆಯ ಸಬ್ ಇನ್ಸ್ಪೆಕ್ಟರ್ ಹರಿನಾಥ್ ಹಲ್ಲೆಗೊಳಗಾದವರು. ಗಂಭೀರ ಗಾಯಗೊಂಡ ಅವರು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪ್ಟೆನ್ ಮಹದೇವಪುರ ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಆರೋಪಿ ಕೆಜಿಎಫ್ ಸುತ್ತಮುತ್ತ ಇರುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ, ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆ ಮೇರೆಗೆ ಮಹದೇವಪುರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹರಿನಾಥ್ ನೇತೃತ್ವದಲ್ಲಿ ವಿಶೇಷ ತಂಡಸಿ, ಕೆಜಿಎಫ್ಗೆ ತೆರಳಿದ್ದರು.
ಆರೋಪಿ ಪಿಎಸ್ಐ ಬಲಗೈಗೆ ಲಾಂಗ್ ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದನು. ಹೀಗಾಗಿ ತಮ್ಮ ಆತ್ಮರಕ್ಷಣೆಗಾಗಿ ಪಿಎಸ್ಐ ಆರೋಪಿ ಮೇಲೆ ಗುಂಡು ಹಾರಿಸಿದ್ದರು. ಅದರಿಂದ ತಪ್ಪಿಸಿಕೊಂಡು ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.