Thu,May16,2024
ಕನ್ನಡ / English

ಕನ್ನಡ ಸಾಹಿತ್ಯ ಲೋಕದ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ | Janata news

06 Mar 2021
1155

ಬೆಂಗಳೂರು : ಕನ್ನಡ ಸಾಹಿತ್ಯ ಲೋಕದಲ್ಲಿ, ಎನ್ನೆಸ್ಸೆಲ್ ಎಂದೇ ಮನೆಮಾತಾಗಿದ್ದ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ವಿಧಿವಶರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಭಟ್ಟರು ಶನಿವಾರ ಬೆಳಗ್ಗೆ 4:45ರ ಸುಮಾರಿಗೆ ಕೊನೆಯುಸಿರೆಳೆದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಬನಶಂಕರಿಯ ಅವರ ನಿವಾಸದಲ್ಲಿ ಬೆಳಗ್ಗೆ 10.30ರವರೆಗೆ ಅಂತಿಮ ದರ್ಶನ ಪಡೆದುಕೊಳ್ಳಬಹುದೆಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು, ಭಾವಗೀತೆ ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ, ಮುಂತಾದ ಹಲವರು ಪ್ರಕಾರಗಳಲ್ಲಿ ವ್ಯವಸಾಯ ಮಾಡಿದ್ದರು. ಜೊತೆಗೆ ಕನ್ನಡ, ಸಂಸ್ಕೃತ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಅಪಾರ ಸಾಹಿತ್ಯ ಕೃಷಿ ಮಾಡಿದ್ದ ಡಾ. ಎನ್‌ಎಸ್ ಲಕ್ಷ್ಮೀನಾರಾಯಣ ಭಟ್ಟರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಭಟ್ಟರು 1936ರ ಅಕ್ಟೋಬರ್​ 29ರಂದು ಶಿವಮೊಗ್ಗದಲ್ಲಿ ಜನಿಸಿದರು. ಇವರ ತಂದೆ ಶಿವರಾಮಭಟ್ಟ, ತಾಯಿ ಮೂಕಾಂಬಿಕೆ. ಎಂಎ ಪದವಿ ಪಡೆದ ಬಳಿಕ ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿದ ಬಳಿಕ ಕಾಲೇಜಿನಲ್ಲಿ ಪ್ರಾಧ್ಯಪಕರಾಗಿ ಸೇವೆ ಆರಂಭಿಸಿದರು.

ಬೆಂಗಳೂರಿನಲ್ಲಿ ಕಾಲೇಜು ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ, ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಹಿಂದೆ ಹೀಗೆ ಚಿಮ್ಮುತ್ತಿತ್ತು ಯಾವ ಘಳಿಗೆಯಲ್ಲಿ, ನೀರ ಮೇಲಿನ ಲೀಲೆ, ನಿತ್ಯ ನಿತ್ಯ ಭೂಮಿ, ಮಾಗಿ ಕೊರೆವ ಬಾಳಿಗೆ ಮುಂತಾದ ಭಾವಗೀತೆಗಳು ಪ್ರಸಿದ್ದಿಯಾಗಿದ್ದವು. ವೃತ್ತಿ, ಸುಳಿ, ನಿನ್ನದೆ ನನ್ನ ಮಾತು, ಹೊಳೆಯ ಸಾಲಿನ ಮರ, ಪಾಂಚಾಲಿ, ಅರುಣಗೀತೆ, ಚಿತ್ರಕೂಟ, ದೀಪಿಕಾ, ಬಾರೋ ವಸಂತ, ಸುನೀತಾ ಕವನ ಸಂಕಲನಗಳನ್ನು ಲಕ್ಷ್ಮೀ ನಾರಾಯಣ ಭಟ್ಟ ಬರೆದಿದ್ದರು.

ಎನ್ನೆಸ್ಸೆಲ್​ ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ, ಜನಪ್ರಿಯ ಪ್ರಧ್ಯಾಪಕರು. ಇವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ. ಎಲಿಯಟ್ಸ್​, ಷೇಕ್ಸ್​ಪಿಯರ್​ ಕಾವ್ಯಗಳನ್ನು ಕನ್ನಡಕ್ಕೆ ಅನುವಾದಿಸಿದರು. ಹೊರಳು ದಾರಿಯಲ್ಲಿ ಕಾವ್ಯ ಈ ವಿಮರ್ಶಾಗ್ರಂಥ ಕ್ಕೆ 1974ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಜಗನ್ನಾಥ ವಿಜಯ, ಮುದ್ರಾಮಂಜೂಷ ಕಾವ್ಯಗಳನ್ನು ರಚಿಸಿದ್ದಾರೆ. ಭಟ್ಟರ ಕಾರ್ಯವನ್ನು ಗುರುತಿಸಿ, ಎನ್.ಸಿ.ಆರ್.ಟಿ ಸಂಸ್ಥೆಯಿಂದ ಶಿಶು ಸಾಹಿತ್ಯಕ್ಕಾಗಿ ಬಾಲಸಾಹಿತ್ಯ ಪುರಸ್ಕಾರ ಲಭಿಸಿದೆ.

RELATED TOPICS:
English summary :NSLaxminarayanbhat passedAway

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...