ಗ್ರಾಮ ವಾಸ್ತವ್ಯಕ್ಕೆ ಬಂದ ಸಚಿವ ಆರ್.ಅಶೋಕ್ಗೆ ಅದ್ಧೂರಿ ಸ್ವಾಗತ | Janata news
ಹುಬ್ಬಳ್ಳಿ : ಗ್ರಾಮ ವಾಸ್ತವ್ಯಕ್ಕಾಗಿ ತಾಲೂಕಿನ ಛಬ್ಬಿ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ದೊರೆಯಿತು.
ಪೂರ್ಣ ಕುಂಭದೊಂದಿಗೆ ಗ್ರಾಮದ ಮಹಿಳೆಯರು ಸ್ವಾಗತಿಸಿದರು. ಜಗ್ಗಲಿಗೆ, ಕೋಲಾಟ, ನಾದಸ್ವರದ ಮೇಳದೊಂದಿಗೆ ಮೆರವಣಿಗೆ ಜರುಗಿದ್ದು, ಸಿಂಗಾರಗೊಂಡ ಎತ್ತಿನ ಚಕ್ಕಡಿ ಓಡಿಸಿಕೊಂಡು ಸಚಿವ ಆರ್.ಅಶೋಕ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗ್ರಾಮವನ್ನು ಪ್ರವೇಶಿಸಿದರು.
ಅಧಿಕಾರಿಗಳು ಜನರ ಬಾಗಿಲಿಗೆ ಬಂದು ಕೆಲಸ ಮಾಡಿಕೊಡಬೇಕು ಎಂದು ಈ ಕಾರ್ಯಕ್ರಮ ಜಾರಿಗೆ ತಂದಿದ್ದೇವೆ. 15 ದಿನ ಮುಂಚಿತವಾಗಿ ಜನರ ಮನೆಗೆ ಹೋಗಿ ಅಧಿಕಾರಿಗಳು ಸಮಸ್ಯೆಗಳ ಪಟ್ಟಿ ತಯಾರಿಸಿದ್ದಾರೆ. ಕಂದಾಯ ಇಲಾಖೆ ಕೆಲಸ, ಪಿಂಚಣಿ ಸೇರಿದಂತೆ ಗ್ರಾಮಸ್ಥರ ಸಮಸ್ಯೆಗಳ ಪಟ್ಟಿ ಮಾಡಿದ್ದಾರೆ. 2ಗ್ರಾಮ ವಾಸ್ತವ್ಯದಿಂದ ಸಾಕಷ್ಟು ಬೇಡಿಕೆ ಬಂದಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಬಂದ ಸಿದ್ದ ಹೋದ ಸಿದ್ದ ಎನ್ನುವುದು ಗ್ರಾಮ ವಾಸ್ತವ ಅಲ್ಲ. 24 ಗಂಟೆಯಲ್ಲಿ ಗ್ರಾಮದ ಸಮಸ್ಯೆಗಳು ಬಗೆಹರಿಯಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.