Sun,May19,2024
ಕನ್ನಡ / English

130 ಗ್ರಾಹಕರಿಗೆ 12 ಲಕ್ಷ ವಂಚನೆಗೈದ ತಮಿಳುನಾಡು ಮೂಲದ ತಂಡದ ಬಂಧನ | Janata news

22 Mar 2021
2852

ಕಾರವಾರ : ಅಮೋಘ ಟ್ರೇಡರ್ಸ್ ಹೆಸರಿನಲ್ಲಿ ನಗರದ 130 ಗ್ರಾಹಕರಿಂದ 12 ಲಕ್ಷ ಹಣ ಪಡೆದು ವಂಚನೆಗೈದ ತಮಿಳುನಾಡಿನ 6 ಜನ ವಂಚಕರ ಜಾಲವನ್ನು 2017ರ ಬಿಯೂಡಿಎಸ್ ಕಾಯ್ದೆಯಡಿ ಭೇದಿಸಿದ್ದು, ಓರ್ವನನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ಜಾರಿಗೊಳಿಸಿರುವ ಬ್ಯಾನ್ಇಂಗ್ ಆಫ್ ಅನ್ ರೆಗ್ಯುಲೇಟೆಡ್ ದೆಪೋಸಿಟ್ಸ ಆಕ್ಟ್ 2017(ಬಿಯೂಡಿಎಸ್) ಅಡಿಯಲ್ಲಿ ಈ ವಂಚನೆಯ ಕುರಿತು ದಾಖಲಾದ ದೂರಿನ ಅನ್ವಯ ವಂಚನೆಗೆ ರೂಪುರೇಷೆ ಹೆಣೆಯುವ ಹಂತದಲ್ಲಿಯೇ ಪ್ರಕರಣವನ್ನು ಭೇದಿಸಿದ ರಾಜ್ಯದಲ್ಲಿಯೇ ಪ್ರಥಮ ಪ್ರಕರಣ ಇದಾಗಿದೆ. ಬಂಧಿತ ವ್ಯಕ್ತಿ ಶಿವರಾಜು ರೆಂಗರಸು(38) ಎಂದು ಗುರುತಿಸಲಾಗಿದ್ದು, ವಂಚನೆ ತಂಡದಲ್ಲಿದ್ದಂತಹ 6 ಜನರೂ ತಮಿಳುನಾಡಿನ ತಂಜಾವೂರಿನವರು, ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದರು.

ಪ್ರಕರಣದ ಹಿನ್ನೆಲೆ:
ಬಂಧಿತ ಆರೋಪಿ ಶಿವರಾಜು ರೆಂಗರಸು, ನಾಸೀರ್ ಮತ್ತು ಗೋವಿಂದರಾಜು ಎಂಬುವರು ಕಾರವಾರದ ಕಾಜುಬಾಗ್‌ದಲ್ಲಿ ಅಂಗಡಿಯನ್ನು ಬಾಡಿಗೆಗೆ ಪಡೆದು 2021ರ ಫೆ. 13ರಿಂದ ಅಮೋಘ ಟ್ರೇಡರ್ಸ್ ಹೆಸರಿನಲ್ಲಿ ಅಂಗಡಿ ಪ್ರಾರಂಭಿಸಿದ್ದಾರೆ. ಅಂಗಡಿಯಲ್ಲಿ ಕೆಲವು ದಿನ ಬಳಕೆಯ ವಸ್ತುಗಳು, ಎಲ್ಲ ಬಗೆಯ ಗೃಹೋಪಯೋಗಿ, ಇಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣಗಳನ್ನು ಜೋಡಿಸಿಟ್ಟು ರಿಯಾಯಿತಿ ದರದಲ್ಲಿ ಅತೀ ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ಸಾರ್ವಜನಿಕರಿಗೆ ತಿಳಿಸುತ್ತಿದ್ದರು.

ನಂತರ ಅವುಗಳನ್ನು ಶೇ.45ರ ಕಡಿಮೇ ದರಕ್ಕೆ ನೀಡಿವುದಾಗಿ ನಂಬಿಸಿ ಗ್ರಾಹಕರಿಂದ ಮುಂಗಡವಾಗಿ ಹಣವನ್ನು ಪಡೆಯುತ್ತಿದ್ದರು. ಮೊದಲು ಬಂದ ಕೆಲವು ಗ್ರಾಹಕರಿಗೆ ಪ್ರಥಮ ಆಧ್ಯತೆ ಮೇರೆಗೆ ಅತೀ ಕಡಿಮೆ ದರದಲ್ಲಿ ವಸ್ತುಗಳನ್ನು ನೀಡುವುದಾಗಿ ತಿಳಿಸಿ ಜನರಿಂದ ಹಣ ಪಡೆದು ಸ್ವಲ್ಪ ದಿನಗಳ ನಂತರ ಮೊದಲು ಹಣ ನೀಡಿದವರಿಗೆ ವಸ್ತುಗಳನ್ನು ಕೊಟ್ಟು ಜನರನ್ನು ಆಕರ್ಷಿಸುತ್ತಿದ್ದರು. ಹೀಗಾಗಿ ಆರೋಪಿಗಳ ಆಮೀಶಕ್ಕೆ ಒಳಗಾಗಿ ನಗರದ ಸುಮಾರು 130ಕ್ಕೂ ಹೆಚ್ಚಿನ ಗ್ರಾಹಕರು ಸುಮಾರು 12 ಲಕ್ಷ ಹಣವನ್ನು ಆರೋಪಿತರಿಗೆ ನೀಡಿ ವಸ್ತುಗಳನ್ನು ಕಾಯ್ದಿರಿಸಿದ್ದರು. ಆದರೆ ವಂಚಕರು ಗ್ರಾಹಕರಿಂದ ಹಣ ಪಡೆದುಕೊಂಡು ಕಾರವಾರದಿಂದ ಪರಾರಿಯಾಗಿದ್ದರು.

ಈ ರೀತಿ ವಂಚನೆಗೆ ಒಳಗಾದವರ ಪೈಕಿ ನಗರದ ಮಾಡಿಬಾಗ ಕಡವಾಡದ ನಿವಾಸಿ ಸಮರ್ಥ ನೇತಾಳಕರ್ ಎಂಬುವರು ಒಬ್ಬರಾಗಿದ್ದಾರೆ. ವಂಚನೆಗೊಳಗಾದ ಸಮರ್ಥ ನೇತಾಳಕರ್ ಆರೋಪಿಗಳ ಬಳಿ ಗೃಹ ಬಳಕೆಯ ಸೋಫಾ, 2 ಕಬ್ಬಿಣದ ಮಂಚ, ವಾಸಿಂಗ್ ಮಶೀನ್, ಕಪಾಟು ಹಾಗೂ ಇತರೆ ಅಡುಗೆ ಪಾತ್ರೆಗಳನ್ನು ತಂದುಕೊಡುವಂತೆ ಮುಂಗಡವಾಗಿ 1 ಲಕ್ಷ 13ಸಾವಿರ ರೂ. ಹಣವನ್ನು ನೀಡಿದ್ದಾರೆ. ನಂತರ ಆರೋಪಿಗಳು ವಸ್ತುಗಳನ್ನು ತಂದುಕೊಡದೇ ವಂಚಿಸಿದ್ದು, ಈ ಕುರಿತು ಕಾರವಾರ ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರು ಜನ ವಂಚಿತರ ತಂಡವನ್ನು ಭೇದಿಸಲಾಗಿದ್ದು, ಈ ಪೈಕಿ ಓರ್ವನನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ. ಉಳಿದ ಐವರನ್ನೂ ಆದಷ್ಟು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸ್‌ಪಿ ಅವರು ತಿಳಿಸಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಬದರಿನಾಥ, ಪೊಲೀಸ್ ಉಪಾಧೀಕ್ಷಕ ಅರವಿಂದ ಕಲಗುಜ್ಜಿಯವರ ಮಾರ್ಗದರ್ಶನದಲ್ಲಿ ಕಾರವಾರ ವೃತ್ತ ನಿರೀಕ್ಷಕ ಸಂತೋಷ ಶೆಟ್ಟಿ, ಪಿಎಸ್‌ಐಗಳಾದ ಸಂತೋಷ ಕುಮಾರ, ಎಸ್.ಬಿ. ಪೂಜಾರಿ, ಹಾಗೂ ಸಿಬ್ಬಂದಿನ್ನೊಳಗೊಂಡ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಿ ವಂಚಕರ ಜಾಲವನ್ನು ಭೇದಿಸಲಾಗಿದೆ ಎಂದರು.

RELATED TOPICS:
English summary :Fraud team from TamilNadu cheated 130 customer of 12Lakh

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...