ಕಾಂಗ್ರೆಸ್ ಮುಖಂಡನ ಬರ್ತಡೇ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ ಮತ್ತೊಬ್ಬ ಮುಖಂಡ | Janata news
ಧಾರವಾಡ : ಕಾಂಗ್ರೆಸ್ ಮುಖಂಡ ಹಾಗೂ ತಾ.ಪಂ. ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನ್ನಗುಡಿ ಜನ್ಮದಿನದ ಸಂಭ್ರಮಾಚರಣೆ ಅಂಗವಾಗಿ ಸಖತ್ ಪಾರ್ಟಿ ಏರ್ಪಡಿಸಲಾಗಿತ್ತು. ಈ ವೇಳೆ ಸರ್ಪರೈಸ್ ಆಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಗಾಳಿಯಲ್ಲಿ ಗುಂಡು ಹಾರಿಸಿ ಅಣ್ಣಪ್ಪಗೌಡಗೆ ಹುಟ್ಟಿದ ದಿನದ ಶುಭಾಶಯ ತಿಳಿಸಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿ ನಡೆದಿತ್ತು. ಈ ಸಂದರ್ಭದಲ್ಲಿ ಹಾಜರಿದ್ದ ಮಲ್ಲಿಕಾರ್ಜುನ ಅವರು, ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ್ದಾರೆ. ಗುಂಡು ಹಾರಿಸಿದ ನಂತರ, ರಿವಾಲ್ವಾರ್ ಪಾಯಿಂಟ್ ಇಟ್ಟು ಶುಭ ಹಾರೈಕೆ ಮಾಡಿದ್ದಾರೆ.
ಈ ಎಲ್ಲ ದೃಶ್ಯ ಮೊಬೈಲ್ವೊಂದರಲ್ಲಿ ಸೆರೆಯಾಗಿದ್ದು,ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಲ್ಲಿಕಾರ್ಜುನ ಆಯಟ್ಟಿ ಮತ್ತು ಹುಟ್ಟುಹಬ್ಬ ಆಚರಿಸಿಕೊಂಡ ಅಣ್ಣಪ್ಪಗೌಡ ಇಬ್ಬರನ್ನೂ ಧಾರವಾಡ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.