Mon,May20,2024
ಕನ್ನಡ / English

ವೀರನಾಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ - ಎಚ್ಚರಿಸಿದ ಎಚ್‌ಡಿಕೆ | Janata news

26 Mar 2021
1835

ಬೆಂಗಳೂರು : ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್‌ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್‌. ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಂ ಅಭ್ಯರ್ಥಿಯನ್ನು ಹಾಕುತ್ತಲೇ ಕಾಂಗ್ರೆಸ್‌ ತಾನು ಮುಸ್ಲಿಮರ ರಕ್ಷಕ ಎಂದು ಎದೆತಟ್ಟಿಕೊಂಡು ಮುಂದೆ ಬಂದಿದೆ, ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಮತಗಳನ್ನು ವಿಭಜಿಸುವ ಹುನ್ನಾರ ನಡೆಸಿದೆ, ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಮಹಾನ್‌ನಾಯಕ ರು ಹೇಳಿದ್ದಾರೆ. ಪ್ರತಿಯೊಂದಕ್ಕೂ ಒಳ ಒಪ್ಪಂದ, ಒಳಸಂಚು ಮಾಡಿದವರಿಗಷ್ಟೇ ಒಳ ಒಪ್ಪಂದದ ಕನವರಿಕೆ. ಆಪರೇಷನ್‌ ಕಮಲದಲ್ಲಿ, ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ. ಜೆಡಿಎಸ್‌ಗೆ ಇಂಥ ದುರ್ಬುದ್ಧಿ ಇಲ್ಲ, ಎಂದು ಲೇವಡಿ ಮಾಡಿದ್ದಾರೆ.

ನಮ್ಮ ರಾಜ್ಯ, ನಮ್ಮ ನೆಲ, ನಮ್ಮ ಪಕ್ಷ, ನಮ್ಮ ಅಭ್ಯರ್ಥಿ. ಇದರಲ್ಲಿ ಜೆಡಿಎಸ್‌ ಯಾರ ಅಪ್ಪಣೆಗೆ ಕಾಯಬೇಕು? ಯಾವ ದೊಣ್ಣೆ ನಾಯಕನ ಆಜ್ಞೆ ಆಗಬೇಕು ನಮಗೆ? ಜನರಿಗೆ ಬೇಕಾದ ಅಭ್ಯರ್ಥಿಗಳನ್ನು ನಾವು ಹಾಕುತ್ತೇವೆ. ಅದರಲ್ಲಿ ನಮಗೆ ಧರ್ಮ ನಗಣ್ಯ. ಪ್ರತಿಯೊಂದರಲ್ಲೂ ಹಿಂದೂ-ಮುಸ್ಲಿಂ ಎಂದು ಹುಡುಕುವವರಿಗೆ ಜನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು, ಎಂದು ತಿರುಗೇಟು ನೀಡಿದ್ದಾರೆ.

ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್‌ನ ಐತಿಹಾಸಿಕ ದುರಭ್ಯಾಸ. ಅದಕ್ಕಾಗಿಯೇ ಮುಸ್ಲಿಮರನ್ನು ಕಾಂಗ್ರೆಸ್‌ ನಮ್ಮ ಮತ ಎನ್ನುತ್ತದೆ. ನಮ್ಮವರು ಅನ್ನುವುದಿಲ್ಲ. ಕಾಂಗ್ರೆಸ್‌ನ ಇಂಥ ತಪ್ಪುಗಳಿಂದಲೇ ಬಿಜೆಪಿ ಈ ಹಂತಕ್ಕೆ ಬೆಳೆದಿದೆ. ದೇಶದಲ್ಲಿ ಕೋಮು ಭಾವನೆಗಳು ಈ ಮಟ್ಟಕ್ಕೆ ಕೆರಳಿರುವುದರ ಹಿಂದೆ ಕಾಂಗ್ರೆಸ್‌ನ ಪ್ರಮಾದಗಳಿವೆ.

ನಮ್ಮ ಆಯ್ಕೆ, ನಿರ್ಧಾರಗಳ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್‌ನ ಮಹಾನ್‌ ನಾಯಕರು ನಿಲ್ಲಿಸಿದರೆ ಉತ್ತಮ. ಇಲ್ಲವಾದಲ್ಲಿ ಜಾತ್ಯತೀತವಾದಿ ಮುಖವಾಡ ಧರಿಸಿರುವ ಅವರ ಕೋಮುವಾದಿ ಮುಖವನ್ನು ಬಯಲು ಮಾಡಬೇಕಾಗುತ್ತದೆ. ಶತಮಾನಗಳಿಂದ ವೀರನಾಗಿ ಮಲಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ, ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

RELATED TOPICS:
English summary :The great leader who made brave Tipu a traitor should keep quite - Warned HDK

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...