Thu,May09,2024
ಕನ್ನಡ / English

ಸಚಿವ ಬಿಸಿ ಪಾಟೀಲ್ ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು | ಜನತಾ ನ್ಯೂಸ್

02 Apr 2021
1970

ಹಾವೇರಿ: : ಸಚಿವರಿಗೆ ಲಸಿಕೆ ನೀಡುವ ಸಲುವಾಗಿ ಬಿ ಸಿ ಪಾಟೀಲ್ ಅವರ ಮನೆಗೆ ಭೇಟಿ ನೀಡುವಂತೆ ತಮ್ಮ ಸಿಬ್ಬಂದಿಗಳಿಗೆ ಆದೇಶಿಸಿದ್ದ ಹಿರೇಕೆರೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಝಡ್. ಆರ್. ಮಕಂದರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಮಾನತುಗೊಳಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ‌ ಸೇವೆಗಳ ಇಲಾಖೆ ಆಯುಕ್ತ ಕೆ.ವಿ. ತ್ರೀಲೋಕ ಚಂದ್ರ ಸೇವೆಯಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಮನೆಯಲ್ಲಿಯೇ ಲಸಿಕೆ ಪಡೆದಿದ್ದಕ್ಕೆ ಸಚಿವ ಬಿ.ಸಿ. ಪಾಟೀಲ್ ವಿವಾದಕ್ಕೆ ಕಾರಣವಾಗಿದ್ದರು. ಮಾರ್ಚ್ 2 ರಂದು ಹಿರೇಕೆರೂರು ಮನೆಯಲ್ಲಿ ಸಚಿವ ಪಾಟೀಲ ಹಾಗೂ ಅವರ ಪತ್ನಿ ವನಜಾ ಪಾಟೀಲ ವ್ಯಾಕ್ಸಿನ್ ಹಾಕಿಸಿಕೊಂದಿದ್ದರು.

ಸರ್ಕಾರದ ನಿಯಮಗಳ ಪ್ರಕಾರ ವಯಸ್ಕರೇ ಆಗಲಿ ವೃದ್ದರೇ ಆಗಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಂಡು ನಿಯಮಾನುಸಾರ ನಿಗದಿತ ಆಸ್ಪತ್ರೆಗೆ ಹೋಗಿ ಲಸಿಕೆ ಹಾಕಿಸಿಕೊಳ್ಳಬೇಕು. ಆದರೆ ಸಚಿವರಿಗೆ ಲಸಿಕೆ ಹಾಕುವ ವಿಚಾರದಲ್ಲಿ ಹಿರೇಕೆರೂರು ಆರೋಗ್ಯ ಅಧಿಕಾರಿಗಳೇ ನಿಯಮಗಳನ್ನು ಮೀರಿ ನಡೆದುಕೊಳ್ಳುವ ಮೂಲಕ ಜನಸಾಮಾನ್ಯರಿಗೊಂದು ನಿಯಮ ಜನಪ್ರತಿನಿಧಿಗಳಿಗೊಂದು ನಿಯಮವೇ? ಎನ್ನುವ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದ್ದವು.

ಸಚಿವರ ಮನೆಗೆ ತೆರಳಿ ಲಸಿಕೆ ನೀಡಿದ್ದ ಸಂಬಂಧ ಡಾ. ಮಕಾಂದಾರ್ ಅವರಿಗೆ ಕಾರಣ ಕೇಳಿ ಡಾ.ರಾಜೇಂದ್ರ ದೊಡ್ಡಮನಿ ಅವರು ಮಾರ್ಚ್ 2 ರಂದು ನೋಟಿಸ್ ಜಾರಿ ಮಾಡಿದ್ದರು. ಸಚಿವರು ತಾಲೂಕಿನ ಪ್ರಥಮ ಪ್ರಜೆಯಾಗಿದ್ದಾರೆ. ಅವರಿಗೆ ಬೈಲ್ಯಾಟರಲ್ ನೀ ಆಸ್ಟಿಯೋ ಆಥ್ರ್ರಿಟಿಸ್ ಹಾಗೂ ಕ್ರಾನಿಕ್ ಲೋಬ್ಯಾಕ್ ಎಖ್‍ಆರೋಗ್ಯ ಸಮಸ್ಯೆ ಇರುವುದರಿಂದ ಸಚಿವರ ಕರೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಅವಶ್ಯಕ ತುರ್ತು ಸೇವೆ ಅಂಬುಲೆನ್ಸ್ ಹಾಗೂ ಔಷಧಗಳೊಂದಿಗೆ ಸಚಿವರಿಗೆ ಕೋವಿಡ್-19 ಲಸಿಕೆಯನ್ನು ನೀಡಿ ನಂತರ 30 ನಿಮಿಷಗಳವರೆಗೆ ನಿಗಾವಹಿಸಲಾಗಿತ್ತು. ಇನ್ನು ಮುಂದೆ ಕೋವಿಡ್-19 ಮಾರ್ಗಸೂಚಿ ಪ್ರಕಾರ ಸಾರ್ವಜನಿಕರಿಗೆ ಲಸಿಕೆ ನೀಡುತ್ತೇವೆ ಎಂದು ಉತ್ತರ ನೀಡಿದ್ದರು.

ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಡಾ.ಮಕಂದರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

RELATED TOPICS:
English summary :BC Patil

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...