Mon,May20,2024
ಕನ್ನಡ / English

ವೆಂಟಿಲೇಟರ್ ಇದ್ದರೂ ಬಳಕೆ ಮಾಡಿಲ್ಲ, ಆಕ್ಸಿಜನ್ ಕೊರತೆಯಿಂದ 4 ಮಂದಿ ಸಾವು, ಜಿಲ್ಲಾ ಶಸ್ತ್ರಚಿಕಿತ್ಸಕರ ತಲೆದಂಡ! | ಜನತಾ ನ್ಯೂಸ್

27 Apr 2021
1714

ಕೋಲಾರ : ಆಕ್ಸಿಜನ್ ಸಮಸ್ಯೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ 4 ಮಂದಿ ಸೋಂಕಿತರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಜಿಲ್ಲಾ ಶಸ್ತ್ರಚಿಕಿತ್ಸಕ, ಆರ್.ಎಂ.ಒ ರನ್ನು ಸಸ್ಪೆಂಡ್ ಮಾಡಿದ್ದಾರೆ.

ಸೋಂಕಿತರ ಸಾವಿನ ಬೆನ್ನಲ್ಲೇ ಸೋಮವಾರ ರಾತ್ರಿ ಆಸ್ಪತ್ರೆಗೆ ದೌಡಾಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ಜಿ.ನಾರಾಯಣಸ್ವಾಮಿ ಮತ್ತು ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ (ಆರ್‌ಎಂಒ) ಡಾ.ನಾರಾಯಣಸ್ವಾಮಿ ಅವರ ಅಮಾನತಿಗೆ ಆದೇಶಿಸಿದರು. ಜತೆಗೆ ಅವರ ವಿರುದ್ಧ ಇಲಾಖಾ ತನಿಖೆಗೆ ಸೂಚನೆ ನೀಡಿದರು.

ಪ್ರಕರಣ ಸಂಬಂಧ ಅಹೋರಾತ್ರಿ ವೈದ್ಯಕೀಯ ಸಿಬ್ಬಂದಿಯ ಸಭೆ ನಡೆಸಿದ ಸಚಿವರು, ಬೆಂಗಳೂರಿನಲ್ಲಿ ಸದ್ಯ ಕನಿಷ್ಠ ಒಂದು ವೆಂಟಿಲೇಟರ್‌ ಪಡೆಯಲು ಹರಸಾಹಸ ಪಡೆಯಬೇಕಿದೆ. ಆದರೆ, ಎಸ್‌ಎನ್‌ಆರ್‌ ಆಸ್ಪತ್ರೆಗೆ ಪೂರೈಕೆಯಾಗಿರುವ 40 ವೆಂಟಿಲೇಟರ್‌ಗಳಲ್ಲಿ ಒಂದನ್ನೂ ಬಳಕೆ ಮಾಡುತ್ತಿಲ್ಲ. ಇದು ದೊಡ್ಡ ಲೋಪ ಎಂದು ಕೆಂಡಾಮಂಡಲರಾದರು.

ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿಕೆಯಲ್ಲಿ ಕೆಲ ಲೋಪಗಳಾಗಿವೆ. ಸೋಂಕಿತರ ಆರೈಕೆಗಾಗಿ ಅವರ ಕುಟುಂಬ ಸದಸ್ಯರಿಗೆ ಐಸಿಯುನಲ್ಲಿ ಇರಲು ಅವಕಾಶ ನೀಡಿರುವುದು ತಪ್ಪು. ಈ ರೀತಿಯ ವ್ಯವಸ್ಥೆಯನ್ನು ಯಾವುದೇ ಆಸ್ಪತ್ರೆಯಲ್ಲಿ ನೋಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಸ್ಪತ್ರೆಯಲ್ಲಿ ಪ್ರತಿನಿತ್ಯ 10 ರಿಂದ 11 ಜನರು ಸಾಯುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಅಟೆಂಡರ್ ಇಟ್ಟಿದ್ದಾರೆ. ರೋಗಿಗಳಿಗೆ ಅಟೆಂಡರ್ ರಾಜ್ಯದಲ್ಲಿ ಎಲ್ಲೂ ಇಲ್ಲ, ಇದು ತಪ್ಪು. ಕೊರೊನಾ ನಿರ್ವಹಣೆಗೆ ಗ್ರಾಮ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಅಂತೆಯೇ ನಿನ್ನೆ ನಡೆದ ಆಕ್ಸಿಜನ್ ಸರಬರಾಜಲ್ಲಿ ಆದ ದೋಷ ಕುರಿತು ತನಿಖೆ ನಡೆಸಲು ಸೂಚನೆ ನೀಡಿದ್ದೇನೆ. ಅಲ್ಲದೆ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳಿಂದ ನಿರ್ವಹಣೆ ಮಾಡುತ್ತಿದ್ದ ಜಿಲ್ಲಾ ಶಸ್ತ್ರಚಿಕಿತ್ಸಕ ಹಾಗೂ ಆರ್.ಎಂ.ಓ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.

RELATED TOPICS:
English summary :Kolar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...