ನಮ್ಮ ದೇಶದಲ್ಲಿ ವ್ಯಾಕ್ಸಿನ್ ಇಲ್ಲ. ನನ್ನ ಬಾಮೈದನಿಗೆ ರೆಮಿಡಿಸಿವರ್ ಔಷಧಿ ಸಿಕ್ಕಿಲ್ಲ :ಸಿದ್ದರಾಮಯ್ಯ | ಜನತಾ ನ್ಯೂಸ್
ಬೆಂಗಳೂರು : ನಮ್ಮ ದೇಶದಲ್ಲಿ ವ್ಯಾಕ್ಸಿನ್ ಇಲ್ಲ. ನನ್ನ ಬಾಮೈದನಿಗೆ ರೆಮಿಡಿಸಿವರ್ ಔಷಧಿ ಸಿಕ್ಕಿಲ್ಲ. ಎಂಪಿ ಬಂದು ವ್ಯಾಕ್ಸಿನ್ ತೆಗೆದುಕೊಂಡು ಹೋಗ್ತಾರೆ. ನಾನು ಕೂಡ ವ್ಯಾಕ್ಸಿನ್ ತೆಗೆದುಕೊಂಡು ಹೋಗ್ತೇನೆ, ನನಗೂ ಅನುಮತಿ ಕೊಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಕೊರೊನಾ ಮಹಾಮಾರಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಯಾವುದೇ ತಯಾರಿ ಮಾಡಿಕೊಂಡಿಲ್ಲ. ಒಂದು ಕೋಟಿಗೆ ಆರ್ಡರ್ ಮಾಡಿದ್ದೇವೆ ಎಂದು ಹೇಳ್ತಾರೆ. ಆರೂವರೆ ಕೋಟಿ ವ್ಯಾಕ್ಸಿನ್ ಬೇಕು. ಅದು ಕೂಡ ಈ ತಿಂಗಳ ಕೊನೆಯಲ್ಲಿ ವ್ಯಾಕ್ಸಿನ್ ಸಿಗುತ್ತದೆ. ಇದು ನನಗೆ ಇರುವ ಮಾಹಿತಿ ಎಂದರು.
ಪೋಲಿಯೊ ಅಭಿಯಾನದ ರೀತಿಯಲ್ಲಿ ವ್ಯಾಕ್ಸಿನ್ ಅಭಿಯಾನ ಆಗಬೇಕು. ದೇಶದಾದ್ಯಂತ ಅಭಿಯಾನ ಆಗಬೇಕು. ಎರಡು ಡೋಸ್ ಪ್ರತಿಯೊಬ್ಬರಿಗೂ ಹಾಕಲೇಬೇಕು. ಯಾರಿಗೆ ಅಗತ್ಯವಿದೆ ಅವರಿಗೆಲ್ಲ ವ್ಯಾಕ್ಸಿನ್ ಹಾಕಬೇಕು. ಇದನ್ನು ಸರ್ಕಾರ ಮಾಡಲೇಬೇಕು ಎಂದರು..