Fri,May17,2024
ಕನ್ನಡ / English

ರೋಹಿಣಿ ಸಿಂಧೂರಿ ಮನೆಯಲ್ಲಿ ಸ್ವಿಮ್ಮಿಂಗ್ ಪೂಲ್, ಜಿಮ್: ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್​ ಮುಖಂಡನ ಗಂಭೀರ ಆರೋಪ | ಜನತಾ ನ್ಯೂಸ್

09 May 2021
1000

ಮೈಸೂರು : ಡಿ.ಸಿ ರೋಹಿಣಿ ಸಿಂಧೂರಿ ತಮ್ಮ ಅಧಿಕೃತ ಸರ್ಕಾರಿ ನಿವಾಸದಲ್ಲಿ ಹೈಟೆಕ್ ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್ ನಿರ್ಮಾಣ ಮಾಡಿಸಿದ್ದಾರೆ. ಜಿಲ್ಲಾಧಿಕಾರಿ ನಿವಾಸವು ಪಾರಂಪರಿಕ ಕಟ್ಟಡಗಳ ವ್ಯಾಪ್ತಿಗೆ ಸೇರಿದ್ದು, ಕೋವಿಡ್ ಸಂಕಷ್ಟ ಕಾಲದಲ್ಲಿ ಇಂತಹ ಮೋಜು ಮಸ್ತಿ ಏಕೆ ಬೇಕಿತ್ತು ಎಂದು ಜೆಡಿಎಸ್‌ ಮುಖಂಡ ಕೆ.ವಿ. ಮಲ್ಲೇಶ್‌ ಕಿಡಿ ಕಾರಿದ್ದಾರೆ.

ಭಾನುವಾರ ಮೈಸೂರಲ್ಲಿ ಮಾತಾಡಿದ ಕೆ. ವಿ. ಮಲ್ಲೇಶ್, ಸ್ವಿಮ್ಮಿಂಗ್ ಪೂಲ್ ನಿರ್ಮಿಸಲು ಯಾವ ಅನುದಾನ ಖರ್ಚು ಮಾಡಲಾಗಿದೆ? ಇದಕ್ಕೆ ಸರ್ಕಾರದ ಅನುದಾನ ಬಳಸಿದ್ದೀರಾ? ಅಥವಾ ಬೇರೆ ಯಾರಾದರೂ ಪ್ರಾಯೋಜಕರ ಸಹಾಯ ಪಡೆದಿದ್ದೀರಾ? ಎಂದರು.

ಕೋವಿಡ್ ಕಾಲದಲ್ಲಿ ದಿನದ 24 ಗಂಟೆಯೂ ಕಾಲ ಕೆಲಸ ಮಾಡುತ್ತೇನೆ ಎಂದು ಹೇಳುತ್ತೀರಿ. ಹಾಗಾದರೆ, ಇಂತಹ ಮೋಜು ಮಸ್ತಿಗೆ ಸಮಯ ಹೇಗೆ ಸಿಗುತ್ತದೆ. ಜನಪರವಾಗಿ ಚಿಂತಿಸುವ ಜಿಲ್ಲಾಧಿಕಾರಿಯಾದವರು ಇಂತಹ ಕೆಲಸ ಮಾಡುವರೇ? ನಿಮಗೆ ನಿಜಕ್ಕೂ ಜನಪರ ಕಾಳಜಿ ಇಲ್ಲ ಎಂದಿದ್ದಾರೆ.

janata


ಆರ್.ಟಿ.ಐ ಮೂಲಕ ಮಾಹಿತಿ ಕೋರುವೆ. ಈ ಕಾಮಗಾರಿಗೆ ಬಳಸಿದ ಅನುದಾನದ ಕುರಿತು ಮಾಹಿತಿ ಕೊಡಬೇಕು ಎಂದು ತಾಯಂದಿರ ದಿನವಾದ ಇಂದು ಆಗ್ರಹಿಸುತ್ತೇನೆ. ಜನರಿಗೆ ಒಳ್ಳೆಯದು ಮಾಡಲು ಆಗದಿದ್ದರೆ, ಮೈಸೂರಿನಿಂದ ನಿರ್ಗಮಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನ ಯಾರೇ ಹೋಗಿ ಸಮಸ್ಯೆ ಹೇಳಿಕೊಂಡರೂ ನಿಮ್ಮ ಹತ್ತಿರ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಪಾರಂಪರಿಕ ಕಟ್ಟಡಗಳ ಸಮಿತಿಗೆ ಜಿಲ್ಲಾಧಿಕಾರಿಗಳೇ ಅಧ್ಯಕ್ಷರು. ಯಾರೇ ಪಾರಂಪರಿಕ ಕಟ್ಟಡದ ಸಮೀಪ ಕಟ್ಟಡ ಕಟ್ಟಬೇಕಾದರೆ ಡಿಸಿ ಅನುಮತಿ ಕಡ್ಡಾಯ. ಈ ವಿಚಾರದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ ಎಂದು ದೂರಿದರು.

ಸ್ವಿಮ್ಮಿಂಗ್‌ ಪೂಲ್ ನಿರ್ಮಾಣದಿಂದ ಪಾರಂಪರಿಕ ಕಟ್ಟಡಕ್ಕೆ ಧಕ್ಕೆಯಾಗಿದೆ ಎಂದು ಪೂಲ್​ನ ಚಿತ್ರಗಳನ್ನು ಪ್ರದರ್ಶಿಸಿ ಮಲ್ಲೇಶ್ ಗಂಭೀರ ಆರೋಪ ಮಾಡಿದರು.

RELATED TOPICS:
English summary :Rohini sinduri

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...