120ಟನ್ ಆಮ್ಲಜನಕ ಹೊತ್ತು ರಾಜ್ಯಕ್ಕೆ ಬಂದ ರೈಲು! | ಜನತಾ ನ್ಯೂಸ್
ಬೆಂಗಳೂರು : ರಾಂಚಿಯ ಟಾಟಾನಗರದಿಂದ ರಾಜ್ಯಕ್ಕೆ ಆಕ್ಸಿಜನ್ ಕಂಟೇನರ್ಗಳನ್ನು ಹೊತ್ತ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಇಂದು ಬೆಂಗಳೂರು ತಲುಪಿದೆ.
ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಆಕ್ಸಿಜನ್ ಪೂರೈಕೆ ಮಾಡಲು ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದ್ದು, ಸುಮಾರು 120 ಟನ್ ಆಕ್ಸಿಜನ್ ಹೊತ್ತ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಜೆಮ್ಶೆಡ್ಪುರ್ನಿಂದ ಸೋಮವಾರ ಹೊರಟಿತ್ತು. ಇಂದು ಬೆಂಗಳೂರಿನ ವೈಟ್ಫೀಲ್ಡ್ಗೆ ಆಗಮಿಸಿದೆ.
ಗ್ರೀಮ್ ಕಾರಿಡಾರ್ಗಳ ಮೂಲಕ ಜೆಮ್ಶೆಡ್ಪುರದಿಂದ ನಿನ್ನೆ ಬೆಳಗಿನ ಜಾವ ಹೊರಟ ಈ ರೈಲು 30 ತಾಸಿನ ಬಳಿಕ ಇಂದು ಬೆಳಗ್ಗೆ 9.30ಕ್ಕೆ ವೈಟ್ ಫೀಲ್ಡ್ ರೈಲ್ವೆ ನಿಲ್ದಾಣಕ್ಕೆ ತಲುಪಿತು.
ಜಮ್ಶೆಡ್ಪುರದಿಂದ ಬೆಂಗಳೂರಿಗೆ ಎಕ್ಸ್ಪ್ರೆಸ್ ರೈಲಿನಲ್ಲಿ 6 ಆಕ್ಸಿಜನ್ ಕಂಟೇನರ್ಗಳು ತಲುಪಿವೆ. ತಲಾ 20 ಟನ್ ಇರುವ ಆಕ್ಸಿಜನ್ ಕಂಟೇನರ್ಗಳು ಈಗ ವೈಟ್ಫೀಲ್ಡ್ನಲ್ಲಿರುವ ಕಾರ್ಪೊರೇಷನ್ ಆಫ್ ಇಂಡಿಯಾ ಡಿಪೋಗೆ ಆಗಮಿಸಿವೆ.
ಕ್ಯಾಂಟರ್ನಲ್ಲಿರುವ ಆಕ್ಸಿಜನ್ ಅನ್ಲೋಡ್ ಮಾಡಿದ ನಂತರ ಖಾಲಿ ಕಂಟೇನರ್ಗಳನ್ನು ಕಳಿಂಗನಗರ್ಗೆ ಕಳುಹಿಸಲಾಗುತ್ತದೆ. ಕಳಿಂಗ ನಗರ್ಗೆ ಖಾಲಿ ಕಂಟೇನರ್ಗಳು ತಲುಪಲು ಸುಮಾರು 30 ಗಂಟೆ ಸಮಯ ಹಿಡಿಯುತ್ತದೆ. ಅಲ್ಲಿ ಐದಾರು ಗಂಟೆಗಳಲ್ಲಿ ಆಕ್ಸಿಜನ್ ರೀಫಿಲ್ ಆಗಲಿದ್ದು ಮತ್ತೆ ಅಲ್ಲಿಂದ ಬೆಂಗಳೂರಿಗೆ ಆಕ್ಸಿಜನ್ ತುಂಬಿದ ಕಂಟೇನರ್ಗಳು ಬಂದು ತಲುಪಲಿವೆ.
ಇನ್ನು ಈ ಬಗ್ಗೆ ಮೇ 10 ರಂದು ಮಾತನಾಡಿದ್ದ ಕಂದಾಯ ಸಚಿವ ಅಶೋಕ್, ಆಕ್ಸಿಜನ್ ಕೊರತೆ ಸ್ವಲ್ಪಮಟ್ಟಿಗೆ ಸುಧಾರಿಸುತ್ತಿದೆ. ರೈಲಿನ ಮೂಲಕ ಆಕ್ಸಿಜನ್ ರಾಜ್ಯಕ್ಕೆ ಬರುತ್ತದೆ. ಎಲ್ಲಾ ಕೊವಿಡ್ ಸೆಂಟರ್ಗಳಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸುತ್ತೇವೆ. ಬೆಂಗಳೂರಿನಲ್ಲಿ 2 ಸಾವಿರ ಕಾನ್ಸಂಟ್ರೇಟರ್ ಅಳವಡಿಸುತ್ತೇವೆ. ಪ್ರತಿ ತಾಲೂಕಿಗೂ 40 ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಕೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಅಶೋಕ್ ತಿಳಿಸಿದ್ದರು.
ಇನ್ನು ಸಾಂಕ್ರಾಮಿಕ ರೋಗದ ವಿರುದ್ಧದ ನಮ್ಮ ಹೋರಾಟವನ್ನು ಬಲಪಡಿಸಲು ಪ್ರಯತ್ನಿಸಿದ ರಾಜ್ಯ ಮತ್ತು ಕರ್ನಾಟಕದ ಇತರ ಕೇಂದ್ರ ಸಚಿವರಿಗೆ ನಿರಂತರ ಬೆಂಬಲ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಟ್ವೀಟ್ ನಲ್ಲಿ ಧನ್ಯವಾದ ಅರ್ಪಿಸಿದ್ದಾರೆ.