Sun,May19,2024
ಕನ್ನಡ / English

120ಟನ್ ಆಮ್ಲಜನಕ ಹೊತ್ತು ರಾಜ್ಯಕ್ಕೆ ಬಂದ ರೈಲು! | ಜನತಾ ನ್ಯೂಸ್

11 May 2021
1515

ಬೆಂಗಳೂರು : ರಾಂಚಿಯ ಟಾಟಾನಗರದಿಂದ ರಾಜ್ಯಕ್ಕೆ ಆಕ್ಸಿಜನ್ ಕಂಟೇನರ್‌ಗಳನ್ನು ಹೊತ್ತ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಇಂದು ಬೆಂಗಳೂರು ತಲುಪಿದೆ.

ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಆಕ್ಸಿಜನ್ ಪೂರೈಕೆ ಮಾಡಲು ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದ್ದು, ಸುಮಾರು 120 ಟನ್ ಆಕ್ಸಿಜನ್ ಹೊತ್ತ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಜೆಮ್‌ಶೆಡ್‌ಪುರ್‌ನಿಂದ ಸೋಮವಾರ ಹೊರಟಿತ್ತು. ಇಂದು ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಆಗಮಿಸಿದೆ.

ಗ್ರೀಮ್ ಕಾರಿಡಾರ್​ಗಳ ಮೂಲಕ ಜೆಮ್​ಶೆಡ್​ಪುರದಿಂದ ನಿನ್ನೆ ಬೆಳಗಿನ ಜಾವ ಹೊರಟ ಈ ರೈಲು 30 ತಾಸಿನ ಬಳಿಕ ಇಂದು ಬೆಳಗ್ಗೆ 9.30ಕ್ಕೆ ವೈಟ್ ಫೀಲ್ಡ್ ರೈಲ್ವೆ ನಿಲ್ದಾಣಕ್ಕೆ ತಲುಪಿತು.

ಜಮ್ಶೆಡ್ಪುರದಿಂದ ಬೆಂಗಳೂರಿಗೆ ಎಕ್ಸ್‌ಪ್ರೆಸ್ ರೈಲಿನಲ್ಲಿ 6 ಆಕ್ಸಿಜನ್ ಕಂಟೇನರ್‌ಗಳು ತಲುಪಿವೆ. ತಲಾ 20 ಟನ್ ಇರುವ ಆಕ್ಸಿಜನ್ ಕಂಟೇನರ್‌ಗಳು ಈಗ ವೈಟ್‌ಫೀಲ್ಡ್‌ನಲ್ಲಿರುವ ಕಾರ್ಪೊರೇಷನ್ ಆಫ್ ಇಂಡಿಯಾ ಡಿಪೋಗೆ ಆಗಮಿಸಿವೆ.

janata


ಕ್ಯಾಂಟರ್​ನಲ್ಲಿರುವ ಆಕ್ಸಿಜನ್ ಅನ್​ಲೋಡ್ ಮಾಡಿದ ನಂತರ ಖಾಲಿ ಕಂಟೇನರ್​ಗಳನ್ನು ಕಳಿಂಗನಗರ್​ಗೆ ಕಳುಹಿಸಲಾಗುತ್ತದೆ. ಕಳಿಂಗ ನಗರ್​ಗೆ ಖಾಲಿ ಕಂಟೇನರ್​​ಗಳು ತಲುಪಲು ಸುಮಾರು 30 ಗಂಟೆ ಸಮಯ ಹಿಡಿಯುತ್ತದೆ. ಅಲ್ಲಿ ಐದಾರು ಗಂಟೆಗಳಲ್ಲಿ ಆಕ್ಸಿಜನ್ ರೀಫಿಲ್​ ಆಗಲಿದ್ದು ಮತ್ತೆ ಅಲ್ಲಿಂದ ಬೆಂಗಳೂರಿಗೆ ಆಕ್ಸಿಜನ್ ತುಂಬಿದ ಕಂಟೇನರ್​ಗಳು ಬಂದು ತಲುಪಲಿವೆ.

ಇನ್ನು ಈ ಬಗ್ಗೆ ಮೇ 10 ರಂದು ಮಾತನಾಡಿದ್ದ ಕಂದಾಯ ಸಚಿವ ಅಶೋಕ್, ಆಕ್ಸಿಜನ್ ಕೊರತೆ ಸ್ವಲ್ಪಮಟ್ಟಿಗೆ ಸುಧಾರಿಸುತ್ತಿದೆ. ರೈಲಿನ ಮೂಲಕ ಆಕ್ಸಿಜನ್ ರಾಜ್ಯಕ್ಕೆ ಬರುತ್ತದೆ. ಎಲ್ಲಾ ಕೊವಿಡ್ ಸೆಂಟರ್ಗಳಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸುತ್ತೇವೆ. ಬೆಂಗಳೂರಿನಲ್ಲಿ 2 ಸಾವಿರ ಕಾನ್ಸಂಟ್ರೇಟರ್ ಅಳವಡಿಸುತ್ತೇವೆ. ಪ್ರತಿ ತಾಲೂಕಿಗೂ 40 ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಕೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಅಶೋಕ್ ತಿಳಿಸಿದ್ದರು.

ಇನ್ನು ಸಾಂಕ್ರಾಮಿಕ ರೋಗದ ವಿರುದ್ಧದ ನಮ್ಮ ಹೋರಾಟವನ್ನು ಬಲಪಡಿಸಲು ಪ್ರಯತ್ನಿಸಿದ ರಾಜ್ಯ ಮತ್ತು ಕರ್ನಾಟಕದ ಇತರ ಕೇಂದ್ರ ಸಚಿವರಿಗೆ ನಿರಂತರ ಬೆಂಬಲ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಟ್ವೀಟ್ ನಲ್ಲಿ ಧನ್ಯವಾದ ಅರ್ಪಿಸಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...