Sun,May19,2024
ಕನ್ನಡ / English

ಡಬಲ್ ಇಂಜಿನ್ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿ ಸರಕಾರ ಕೆಟ್ಟು ನಿಂತಿದೆ: ಡಿ.ಕೆ.ಶಿವಕುಮಾರ್ | ಜನತಾ ನ್ಯೂಸ್

13 May 2021
919

ಬೆಂಗಳೂರು : ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರಗಳು ಡಬಲ್ ಇಂಜಿನ್ ರೀತಿಯಲ್ಲಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೊರೋನ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್‌ಗಳು ಕೆಟ್ಟು ನಿಂತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಲಸಿಕಾ ಅಭಿಯಾನಕ್ಕೆ ಸಿಎಂ ಬಿಎಸ್​ವೈ ಚಾಲನೆ ನೀಡಿದರು. ಆಗ ಮುಖ್ಯಮಂತ್ರಿಗೆ ಎಷ್ಟು ಲಸಿಕೆ ಇದೆ ಎನ್ನುವುದು ಗೊತ್ತಿರಲಿಲ್ಲವಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಉಚಿತವಾಗಿ ಲಸಿಕೆ ನೀಡಲು ಸರ್ಕಾರಕ್ಕೆ ಆಗುವುದಿಲ್ವಾ. ಸರ್ಕಾರದಿಂದ ಆಗದಿದ್ದರೆ ನಾವೇ ವ್ಯವಸ್ಥೆ ಮಾಡುತ್ತೇವೆ. ಸರ್ಕಾರದ ಡಬಲ್ ಎಂಜಿನ್ ಈಗ ನಿಂತೋಗಿದೆ. ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಇವರ ಕೈಯಲ್ಲಿ ಯಾವುದೇ ಪ್ಲ್ಯಾನ್ ಇಲ್ಲದೆ ಸರ್ಕಾರ ನಡೆಸಲು ಆಗುತ್ತಿಲ್ಲ ಎಂದು ಹೇಳಿದರು.

ಚಾಮರಾಜನಗರ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಡಿಕೆಶಿ, 24 ರೋಗಿಗಳ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರವೇ ಕಾರಣ. ನಿವೃತ್ತ ನ್ಯಾಯಮೂರ್ತಿಗಳು ಕೂಡ ಇದೇ ವರದಿ ಕೊಟ್ಟಿದ್ದಾರೆ. ಈ ಸಾವುಗಳಿಗೆ ಯಾರು ಹೊಣೆ ಹೊರುತ್ತಾರೆಂದು ನೀವೆ ನಿರ್ಧರಿಸಬೇಕು ಎಂದು ಹೇಳಿದರು.

ಲಸಿಕೆ ಉಚಿತವಾಗಿ ನೀಡುತ್ತೇವೆ ಎಂದರು. 18-44ರ ವಯೋಮಾನದವರಿಗೆ ಲಸಿಕೆ ಅಂತಾ ಮೇ 1ರಂದು ಉದ್ಘಾಟನೆಯನ್ನೂ ಮಾಡಿದರು. ಇವತ್ತು ಲಸಿಕೆ ಕೊಡಲು ಆಗಲ್ಲ ಎನ್ನುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿರುವ ಡಬಲ್ ಇಂಜಿನ್ ಸರಕಾರ ಬಹಳ ಚೆನ್ನಾಗಿ ಆಡಳಿತ ಮಾಡಲಿವೆ ಎಂದಿದ್ದರು. ಆದರೆ ಈ ಡಬಲ್ ಇಂಜಿನ್ ಗಳು ನಿಂತು ಹೋಗಿವೆ ಎಂದು ಕಿಡಿಕಾರಿದರು.

ಆಕ್ಸಿಜನ್ ಪೂರೈಸುವಂತೆ ಆದೇಶಿಸಿ ಹೈಕೋರ್ಟ್ ರಾಜ್ಯದ ಜನರಿಗೆ ನ್ಯಾಯ ಒದಗಿಸಿತ್ತು. ಆದರೆ ಕೇಂದ್ರ ಸರಕಾರ ಆಕ್ಸಿಜನ್ ಕಳುಹಿಸಿದೆ ಎಂದು ಇವರು ಶಹಬ್ಬಾಶ್ ಗಿರಿ ತೆಗೆದುಕೊಳ್ಳುತ್ತಿದ್ದಾರೆ. ಅವರು ಯಾರಿಗಾದರೂ ಶಹಬ್ಬಾಶ್ ಗಿರಿ ಕೊಡಲಿ, ಒಟ್ಟಾರೆ ಜನರ ಪ್ರಾಣ ಉಳಿಸಿದರೆ ಸಾಕು ಎಂದರು.

ಇನ್ನು ರೈತರ ಪರಿಸ್ಥಿತಿ ದೇವರಿಗೇ ಪ್ರೀತಿ. ರಸಗೊಬ್ಬರ ಬೆಲೆ ಕಡಿಮೆಯಾಗಲಿಲ್ಲ. ಲಾಕ್ ಡೌನ್ ಸಂತ್ರಸ್ತ ಪ್ರತಿ ಕುಟುಂಬಕ್ಕೆ 10 ಸಾವಿರ ರುಪಾಯಿ ನೆರವು ನೀಡಬೇಕು ಎಂಬುದು ನಮ್ಮ ಆಗ್ರಹ. ಗೊಬ್ಬರದ ಬೆಲೆ ಕಡಿಮೆ ಮಾಡಬೇಕು. ತರಕಾರಿ, ಹೂ ಬೆಳೆದು, ನಷ್ಟ ಆದವರಿಗೆ ಪರಿಹಾರ ಕೊಡಬೇಕು. ಸಾಂಪ್ರದಾಯಿಕ ವೃತ್ತಿ ಆಧರಿಸಿದವರಿಗೆ, ಜಿಮ್, ಸಿನಿಮಾ ತಂತ್ರಜ್ಞರಿಗೆ ನೆರವು ಸಿಗಬೇಕು. ನಿಮ್ಮಿಂದ ಇದನ್ನು ನಿಭಾಯಿಸಲು ಆಗುತ್ತಿಲ್ಲ. ಕೋವಿಡ್ ಪ್ರಕರಣದ ಸಂಖ್ಯೆ ಕಡಿಮೆ ಮಾಡಲು ಪರೀಕ್ಷೆ ನಡೆಸುವುದನ್ನೇ ಕಡಿಮೆ ಮಾಡಿದ್ದೀರಿ ಎಂದರು.

RELATED TOPICS:
English summary :DKShivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...