ಕರೊನಾ ಮುಕ್ತ ಗ್ರಾಮಕ್ಕೆ 25 ಸಾವಿರ ನಗದು ಬಹುಮಾನ: ರೋಹಿಣಿ ಸಿಂಧೂರಿ ಘೋಷಣೆ | ಜನತಾ ನ್ಯೂಸ್
ಮೈಸೂರು : ಕೊರೊನಾ ಮುಕ್ತ ಗ್ರಾಮಕ್ಕೆ ಅಭಿನಂದಿಸಿ 25 ಸಾವಿರ ರೂ.ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.
ಗ್ರಾಪಂ ವ್ಯಾಪ್ತಿಯಲ್ಲಿ ಕೋವಿಡ್ ಮುಕ್ತ ಮಾಡಿದ್ರೆ ಅವರಿಗೆ ಪ್ರಶಸ್ತಿ ಕೊಡ್ತೇವೆ. ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ಮಾಡಿದರೆ ಮಾಹಿತಿ ನೀಡುವಂತೆ ಪ್ರಧಾನಿ ಕೇಳಿದ್ದಾರೆ.
ನಾವು ಶುರು ಮಾಡಿರುವ ಕೋವಿಡ್ ಮಿತ್ರ ಪರಿಕಲ್ಪನೆಯನ್ನ ಮೈಸೂರಿನಿಂದ ಕಳುಹಿಸುತ್ತೇವೆ. ಜಿಲ್ಲೆಯ 175 ಪ್ರಾಥಮಿಕ ಕೇಂದ್ರಗಳು ಕೋವಿಡ್ ಮಿತ್ರ ಆಗಿದೆ. ಸೋಂಕಿನ ಲಕ್ಷಣ ಇದ್ದವರು ಅಲ್ಲಿ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದಾರೆ.
ಸೋಂಕಿತರಿಗೆ ಮೊದಲ 5 ದಿನ ಮುಖ್ಯವಾದದ್ದು. ತಕ್ಷಣ ಅಗತ್ಯ ಮೆಡಿಸಿನ್ ಕೊಡುವ ಕೆಲಸವಾಗುತ್ತಿದೆ. ಇದರಿಂದ ನಗರ ಆಸ್ಪತ್ರೆಗಳ ಅವಲಂಬನೆ ಕಡಿಮೆಯಾಗಿದೆ. ಇದೇ ರೀತಿ ನಗರದಲ್ಲೂ ಕೋವಿಡ್ ಮಿತ್ರ ಸೆಂಟರ್ ತೆರೆಯುತ್ತಿದ್ದೇವೆ ಎಂದರು.
"ಟೆಲಿಮೆಡಿಷನ್ ಕಾನ್ಸೆಪ್ಟ್ ಕೂಡ ವಕ್೯ ಆಗುತ್ತಿದೆ. ಯುಕೆಯಲ್ಲಿರುವ ಮೈಸೂರಿನ ವೈದ್ಯರು ಭಾಗಿಯಾಗುತ್ತಿದ್ದಾರೆ. ನುರಿತ ವೈದ್ಯರಿಂದ ಜನರಿಗೆ ಟೆಲಿ ಟ್ರೀಟ್ಮೆಂಟ್ ಕೊಡುವ ಕೆಲಸವಾಗುತ್ತಿದೆ. ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು. "