ಪರ ಸ್ತ್ರೀ ಜೊತೆ ಯುವಕನ ಚೆಲ್ಲಾಟ, ಸರಸ ಆಡುವಾಗಲೇ ಸಿಕ್ಕಿಬಿದ್ದ ಜೋಡಿ! ಮುಂದೇನಾಯ್ತು .. | ಜನತಾ ನ್ಯೂಸ್
ಚಾಮರಾಜನಗರ : ಮನೆಯಲ್ಲಿ ಪತಿ ಇಲ್ಲದ ವೇಳೆ ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ ಗಂಡನಿಗೆ ಗೊತ್ತಾಗದ್ದಂತೆ ಸರಸ-ಸಲ್ಲಾಪದಲ್ಲಿ ತೊಡಗುತ್ತಿದ್ದಳು. ಈ ನಡುವೆ ಪ್ರೇಯಸಿಗೆ ಮುತ್ತಿಡುವಾಗ ಪ್ರಿಯಕರ ಕ್ಲಿಕ್ಕಿಸಿದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಗೂ ಹಾಕಿಕೊಂಡಿದ್ದ. ಈ ವಿಷಯ ತಿಳಿದ ಪತಿ ಈ ಅಕ್ರಮ ಸಂಬಂಧವನ್ನು ಕೊಲೆಯಲ್ಲಿ ಅಂತ್ಯಗೊಳಿಸಿದ್ದಾನೆ.
ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಶಿವಣ್ಣನ ಪತ್ನಿ ಸೌಭಾಗ್ಯ ಜತೆ ಬಸವಶೆಟ್ಟಿಗೆ ಅಕ್ರಮ ಸಂಬಂಧ ಇತ್ತು. ಈ ವಿಷಯ ಪತಿ ಶಿವಣ್ಣಗೆ ತಿಳಿಯಿತು. ಪ್ರಿಯಕರ ಮತ್ತು ಪತ್ನಿ ಚುಂಬಿಸಿದ ಫೋಟೋವನ್ನೂ ಶಿವಣ್ಣ ನೋಡಿದ.
ಭಾನುವಾರ ರಾತ್ರಿ ಮನೆಗೆ ಹೋದಾಗ ಅಲ್ಲಿ ಪತ್ನಿ ಹಾಗು ಪ್ರಿಯಕರ ಬಸವಶೆಟ್ಟಿ ಸಲ್ಲಾಪದಲ್ಲಿ ಮುಳುಗಿದ್ದ ದೃಶ್ಯ ನೋಡಿದ, ಸಿಟ್ಟಿಗೆದ್ದ ಶಿವಣ್ಣ ತನ್ನ ಪತ್ನಿಯ ಪ್ರಿಯಕರ ಬಸವಶೆಟ್ಟಿಯನ್ನ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾನೆ.
ತೀವ್ರ ರಕ್ತಸ್ರಾವವಾಗಿ ಪ್ರಜ್ಞೆ ಕಳೆದುಕೊಂಡಿದ್ದ ಬಸವಶೆಟ್ಟಿ(26) ಸುತ್ತುಹೊಗಿದ್ದಾನೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.