Mon,May20,2024
ಕನ್ನಡ / English

ಕಪ್ಪು ಶಿಲೀಂಧ್ರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ಹೆಚ್ ಡಿ ಕುಮಾರಸ್ವಾಮಿ ಒತ್ತಾಯ | ಜನತಾ ನ್ಯೂಸ್

21 May 2021
1109

ಬೆಂಗಳೂರು : ಕಪ್ಪು ಶಿಲೀಂಧ್ರ ಸೋಂಕನ್ನು (ಮ್ಯೂಕರ್‌ ಮೈಕೊಸಿಸ್‌) ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ರಾಜ್ಯವೂ ಈ ಮಾರಕ ಕಾಯಿಲೆಯನ್ನು ಈ ಕೂಡಲೇ "ಸಾಂಕ್ರಾಮಿಕ" ಎಂದು ಘೋಷಿಸಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರೋಗದ ತಡೆಗಾಗಿ ತ್ವರಿತ, ಅಗತ್ಯ ಕ್ರಮ ಕೈಗೊಳ್ಳಲು, ಮುಂಚೂಣಿಯಲ್ಲಿ ಹೋರಾಡುವವರನ್ನು ರಕ್ಷಿಸಲು 1897ರ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯನ್ನು ಕಪ್ಪು ಶಿಲೀಂಧ್ರ ರೋಗದ ವಿಚಾರದಲ್ಲಿ ಜಾರಿ ಮಾಡಲೇಬೇಕಾಗಿದೆ. ಕಪ್ಪು ಶಿಲೀಂಧ್ರ ರೋಗದಲ್ಲಿ ಸಾವಿನ ಸಾಧ್ಯತೆಗಳು ಹೆಚ್ಚಿವೆ. ಮಾರಕ, ಭಯಾನಕವೂ ಆಗಿರುವ ಈ ಕಾಯಿಲೆಯನ್ನು ಹಿಮ್ಮೆಟ್ಟಿಸಲೇಬೇಕಿದೆ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ರೋಗಗಳ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ಆಲಸ್ಯ ಸರಿಯಲ್ಲ. ಕಪ್ಪು ಶಿಲೀಂಧ್ರ ರೋಗದ ನಿರ್ವಹಣೆಯಲ್ಲಿ ಸರ್ಕಾರ ಪದೇ ಪದೇ ಎಡವುತ್ತಿರುವುದು ಕಾಣಿಸುತ್ತಿದೆ. ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ದಾಸ್ತಾನು ಹೊಂದದೇ ಇರುವುದು, ಅಗತ್ಯ ಪ್ರಮಾಣದ ಔಷಧವನ್ನು ಕೇಳಿ ಪಡೆದುಕೊಳ್ಳದೇ ಇರುವುದು ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ.ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ ಹೆಚ್ಚು. ಕೋವಿಡ್‌ ಪ್ರಕರಣಗಳು ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿವೆ. ಅಂದರೆ, ಕಪ್ಪು ಶಿಲೀಂಧ್ರ ರೋಗವೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್‌ಟಿ ಪರಿಣತರು, ಜನರಲ್ ಸರ್ಜನ್‌ಗಳು, ನರರೋಗ ತಜ್ಞರು, ದಂತವೈದ್ಯರನ್ನು ಸರ್ಕಾರ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಒತ್ತಾಯಿಸಿದ್ದಾರೆ.

RELATED TOPICS:
English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...