Sun,May19,2024
ಕನ್ನಡ / English

ಗೃಹ ಸಚಿವರನ್ನು ಅತ್ಯಾಚಾರ ಆರೋಪಿ ಭೇಟಿ ಮಾಡಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲು: ಸಿದ್ದರಾಮಯ್ಯ | ಜನತಾ ನ್ಯೂಸ್

27 May 2021
1572

ಬೆಂಗಳೂರು : ರಮೇಶ್ ಜಾರಕಿಹೊಳಿ ಅವರಿಗೆ ಸರ್ಕಾರ ಸಂಪೂರ್ಣ ರಕ್ಷಣೆ ಕೊಡುತ್ತಿದೆ. ಎಸ್‍ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿಯನ್ನ ರಜೆ ಮೇಲೆ ಕಳುಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಾಚಾರ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿ, ಚರ್ಚೆ ನಡೆಸಿರುವ ಗೃಹ ಸಚಿವ ಬೊಮ್ಮಾಯಿ ತಮ್ಮ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದು, ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಅವರಿಗೆ ಯಾರೆಲ್ಲಾ ಮಂತ್ರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ರಕ್ಷಣೆ ನೀಡುತ್ತಿದ್ದಾರೆ ಅವರೆಲ್ಲರ ಹೆಸರುಗಳನ್ನು ತನಿಖೆಯ ಮೂಲಕ ಬಹಿರಂಗಪಡಿಸಬೇಕು ಮತ್ತು ಅಂಥವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂದು ಸಿಎಂ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣ ದಾಖಲಾಗಿ, ಸಂತ್ರಸ್ತ ಯುವತಿ ವಿಶೇಷ ತನಿಖಾ ತಂಡದ ಎದುರು ರಮೇಶ್ ಜಾರಕಿಹೊಳಿ ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಹೇಳಿಕೆ ನೀಡಿದ ಮೇಲೆಯೂ ಜಾರಕಿಹೊಳಿಯನ್ನು ಪೊಲೀಸರು ಏಕೆ ಬಂಧಿಸಿಲ್ಲ? ಅತ್ಯಾಚಾರ ಆರೋಪಿಯೊಬ್ಬ ಸ್ವಚ್ಛಂದವಾಗಿ ಓಡಾಡಿಕೊಂಡಿರಲು ರಾಜ್ಯ ಸರ್ಕಾರದ ಕೃಪಾಕಟಾಕ್ಷ ಕಾರಣವಲ್ಲದೆ ಇನ್ನೇನು? ಅತ್ಯಾಚಾರ ಆರೋಪಿಯಾದ ರಮೇಶ್ ಜಾರಕಿಹೊಳಿ ಕಳೆದ ಶನಿವಾರ ರಾಜ್ಯದ ಗೃಹ ಸಚಿವರನ್ನು ಭೇಟಿಮಾಡಿ, ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ್ದಾರೆ. ಅತ್ಯಾಚಾರ ಆರೋಪಿಯೊಬ್ಬ ಗೃಹ ಸಚಿವರನ್ನು ಭೇಟಿಮಾಡಿ, ಮಾತುಕತೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು ಎಂದು ಅವರು ಟೀಕಿಸಿದ್ದಾರೆ.

ನನಗೆ ಇರುವ ಮಾಹಿತಿ ಪ್ರಕಾರ, ಆರೋಪಿ‌ ಸ್ಥಾನದಲ್ಲಿ ಇರುವ ರಮೇಶ ಜಾರಕಿಹೊಳಿ ಶನಿವಾರ ಗೃಹ ಸಚಿವರನ್ನು ಹುಬ್ಬಳ್ಳಿಯಲ್ಲಿ ಭೇಟಿ‌ ಮಾಡಿ ಪ್ರಕರಣದ ಬಗ್ಗೆ ಚರ್ಚೆ ಮಾಡಿದ್ದಾರೆ. ಪ್ರಲ್ಹಾದ್‌ ಜೋಶಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಒಬ್ಬ ಅತ್ಯಾಚಾರ ಆರೋಪಿ ಗೃಹ ಸಚಿವರನ್ನು ಭೇಟಿ ಮಾಡಿರುವುದು ಇದೇ ಮೊದಲು.

ರಮೇಶ ಜಾರಕಿಹೊಳಿ ಅವರನ್ನು ಬಿಪಿ, ಶುಗರ್ ಪರೀಕ್ಷೆ ಮಾಡಿ ಕಳುಹಿಸಿದ್ದಾರೆ. ಇದುವರೆಗೂ ಡಿಎನ್‌ಎ ಟೆಸ್ಟ್ ಮಾಡಿಲ್ಲ. ಕಾನೂನು ಪ್ರಕರಣ ಡಿಎನ್‌ಎ ಪರೀಕ್ಷೆ ಮಾಡಬೇಕಿತ್ತು. ಇಂಥ ಪ್ರಕರಣಗಳಲ್ಲಿ ಆರೋಪಿಯ ಡಿಎನ್‌ಎ ಟೆಸ್ಟ್ ಮಾಡಬೇಕೆಂದು ಈ ಹಿಂದೆ ಸುಪ್ರೀಂ ಕೋರ್ಟ್ ಕೂಡಾ ಹೇಳಿದೆ. ಆದರೆ, ರಮೇಶ ಜಾರಕಿಹೊಳಿಯ ರಕ್ಷಣೆಯನ್ನು ಸರ್ಕಾರ ಮಾಡುತ್ತಿದೆ. ಒಪ್ಪಿಗೆ ಮೇರೆ ಎಲ್ಲ ನಡೆದಿದೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ಬರಲು ರಮೇಶ ಜಾರಕಿಹೊಳಿ ಕಾರಣವಾಗಿದ್ದಾರೆ. ಹೀಗಾಗಿ, ಅವರನ್ನು ಈವರೆಗೂ ಬಂಧಿಸಿಲ್ಲ ಎಂದು ದೂರಿದರು.

"ಆರಂಭದಲ್ಲಿ ವಿಡಿಯೊ ನಕಲಿ ಎಂದು ರಮೇಶ ಜಾರಕಿಹೊಳಿ ಹೇಳಿದ್ದರು. ಇದೀಗ ವಿಡಿಯೊದಲ್ಲಿ ಇರುವುದು ನಾನೇ ಎಂದು ಹೇಳಿದ್ದಾರೆ. ನಾನು, ನಾನೇ - ಅವಳು, ಅವಳೇ ಎಂದಿದ್ದಾರೆ" ಎಂದು ರಮೇಶ್ ಜಾರಕಿಹೊಳಿ ನಡೆಯನ್ನು ಸಿದ್ದರಾಮಯ್ಯ ಲೇವಡಿ ಮಾಡಿದರು.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...