Sat,May18,2024
ಕನ್ನಡ / English

ಯುವತಿ ವಿಚಾರದಲ್ಲಿ ಗಲಾಟೆ, ಹಲ್ಲೆಗೊಳಗಾಗಿ ಯುವಕ ಸಾವು! | ಜನತಾ ನ್ಯೂಸ್

28 May 2021
2774

ಹಾಸನ : ಯುವತಿ ವಿಚಾರದಲ್ಲಿ ಗಲಾಟೆ ಮಾಡಿಕೊಂಡು ಹಲ್ಲೆಗೊಳಗಾಗಿದ್ದ ಯುವಕನೋರ್ವ ತಿಂಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ.

ಅಶ್ವಥ್ (28) ಅನುಮಾನಸ್ಪದವಾಗಿ ಕೊನೆಯುಸಿರೆಳೆದಿರೋ ಯುವಕ. ಹಾಸನ ತಾಲ್ಲೂಕಿನ ಎಸ್.ಬಂಡೀಹಳ್ಳಿಯಲ್ಲಿ ಏ.28 ರಂದು ಅಶ್ವಥ್​​ಗೆ ಕಲ್ಲು, ದೊಣ್ಣೆಗಳಿಂದ ಥಳಿಸಲಾಗಿತ್ತು ಎಂದು ಪೋಷಕರು ಆರೋಪ ಮಾಡಿದ್ದಾರೆ. ಇತ್ತೀಚೆಗೆ ಅಶ್ವಥ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ. ತಲೆಯಲ್ಲಿ ರಕ್ತ ಹಪ್ಪುಗಟ್ಟಿ ಆತ ಕೊನೆಯುಸಿರೆಳೆದಿದ್ದಾನೆ ಅಂತ ವೈದ್ಯರು ಹೇಳಿದ್ದಾರೆ.

ಕಳೆದ ತಿಂಗಳ ಏ.28ರಂದು ಯುವತಿಯ ಕಡೆಯುವರು ಹಲ್ಲೆ ನಡೆಸಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿ ಆತ ಕೊನೆಯುಸಿರೆಳೆದಿದ್ದಾನೆ ಎಂಬುದು ಪೋಷಕರು ನೀಡಿದ ದೂರಿನಲ್ಲಿ ತಿಳಿದು ಬಂದಿದೆ.

ಹಾಸನ ತಾಲೂಕಿನ ಎಸ್. ಬಂಡೀಹಳ್ಳಿಯಲ್ಲಿ ಯುವತಿ ವಿಚಾರಕ್ಕೆ ಸಂಬಂಧಪಟ್ಟಂತೆ ಏ. 28 ರಂದು ನಡೆದ ಗಲಾಟೆಯಲ್ಲಿ ಹಾಸನ ತಾಲೂಕಿನ ಗಾಡೇನಹಳ್ಳಿ ಗ್ರಾಮದ ಅಶ್ವತ್ಥ್ ಗಂಭೀರವಾಗಿ ಗಾಯಗೊಂಡಿದ್ದ.ಯುವತಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಈ ಗಲಾಟೆ ನಡೆದಿದ್ದು, ಯುವತಿಯೊಂದಿಗೆ ಯಾವುದೇ ರೀತಿಯ ಸಂಪರ್ಕವನ್ನು ಇಟ್ಟುಕೊಳ್ಳಬಾರದೆಂದು ಹಲವು ಬಾರಿ ಬಂಡೀಹಳ್ಳಿ ಗ್ರಾಮಸ್ಥರು ಅಶ್ವತ್ಥ್​ ಪೋಷಕರನ್ನ ಕರೆದು, ನಿಮ್ಮ ಮಗನಿಗೆ ಬುದ್ದಿ ಹೇಳಿ ಅಂತ ತಿಳಿಸಿದ್ದರು ಎನ್ನಲಾಗಿದೆ.

ಆದರೆ, ಅಶ್ವತ್ಥ್ ಮಾತ್ರ ಸುಮ್ಮನಾಗದೇ ಯುವತಿಯನ್ನು ಪ್ರೀತಿಸುತ್ತಿದ್ದ. ಆಕೆಯನ್ನೇ ಮದುವೆಯಾಗುವುದಾಗಿ ಹೇಳಿದ್ದ. ಗಲಾಟೆಯ ಬಳಿಕ ಪಾನಮತ್ತನಾಗಿ ಬಂಡಿಹಳ್ಳಿ ಗ್ರಾಮಕ್ಕೆ ಗಲಾಟೆ ಮಾಡಿದ ಹಿನ್ನೆಲೆ ಗ್ರಾಮಸ್ಥರು ಅಶ್ವತ್ಥ್‌​ಗೆ ಥಳಿಸಿದ್ದರು.ನಂತರ ರಾಜಿ ಪಂಚಾಯ್ತಿ ಮೂಲಕ ಸಮಸ್ಯೆ ಬಗೆಹರಿದಿತ್ತು.

ಆದರೆ, ಕಳೆದ ಮೂರು ದಿನಗಳ ಹಿಂದೆ ಅಶ್ವತ್ಥ್ ಇದಕ್ಕಿದ್ದಂತೆ ತಲೆಸುತ್ತಿ ಬಿದ್ದಿದ್ದಾನೆ. ಕೂಡಲೇ ಪೋಷಕರು ಹಾಸನದ ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.

ಅಶ್ವಥ್​​​ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿತ್ತು ಅಂತಾ ವೈದ್ಯರು ಹೇಳುತ್ತಿದ್ದಾರೆ. ಹಿಂದೆ ನಡೆದ ಗಲಾಟೆಯಲ್ಲಿ ಏನಾದ್ರು ತಲೆಗೆಪೆಟ್ಟು ಬಿತ್ತೋ ಅಥವಾ ಸ್ವಾಭಾವಿಕವಾಗಿ ಏನಾದ್ರು ಅಶ್ವಥ್ ಮೃತಪಟ್ಟನೋ ಅನ್ನೋದು ಮರಣೋತ್ತರ ಪರೀಕ್ಷೆ ನಂತ್ರ ತಿಳಿಯಬೇಕಿದೆ.

ಈ ಸಂಬಂಧ ಮೃತ ಯುವಕನ ಪೋಷಕರು, ಕೊಲೆ ಆರೋಪದಡಿ ಕೆಲ ಗ್ರಾಮಸ್ಥರ ವಿರುದ್ಧ ಶಾಂತಿಗ್ರಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಸಿಕೊಂಡಿರುವ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Hasan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...