Sun,May19,2024
ಕನ್ನಡ / English

ಜೂನ್‌ 7 ನಂತರ ಲಾಕ್‌ಡೌನ್‌ ವಿಸ್ತರಣೆ ಬಗ್ಗೆ ಸಿಎಂ ಬಿಎಸ್‌ವೈ ಹೇಳಿದ್ದೇನು? | ಜನತಾ ನ್ಯೂಸ್

29 May 2021
1215

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಕುರಿತು ಜೂನ್ 5 ರಂದು ನಿರ್ಧರಿಸಲಾಗುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಜೂನ್ 7ರ ವರೆಗೆ ಎಂದಿನಂತೆ ಲಾಕ್​ಡೌನ್​ ಇರುತ್ತದೆ. ಜೂನ್ 7ರ ನಂತರ ಲಾಕ್​ಡೌನ್​ ಪ್ರಶ್ನೆ ಉದ್ಭವಿಸಲ್ಲ ಅನಿಸುತ್ತೆ. ಆದರೆ ರಾಜ್ಯದ ಜನರು ಸಹಕಾರ ನೀಡಬೇಕು. ಜೂನ್ 7 ರ ವರೆಗೆ ರಾಜ್ಯದಲ್ಲಿ ಬಿಗಿ ಕ್ರಮ ಮುಂದುವರಿಯುತ್ತದೆ. ಕೊರೊನಾ ನಿಯಂತ್ರಣ ನೋಡಿಕೊಂಡು ಲಾಕ್​ಡೌನ್​ ಬಗ್ಗೆ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.

ಪಿಎಂ ಕೇರ್ಸ್ ವೆಂಟಿಲೇಟರ್​ನಲ್ಲಿ ಕೆಲವೊಂದು ಸಮಸ್ಯೆಯಿದೆ. ಸಮಸ್ಯೆ ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದು ವಿಡಿಯೋ ಕಾನ್ಫರೆನ್ಸ್ ಬಳಿಕ ಸಿಎಂ ಯಡಿಯೂರಪ್ಪ ತಿಳಿಸಿದರು. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಲಸಿಕೆ ಪೂರೈಕೆ ಬಗ್ಗೆ ಮಾತಾಡಿರುವೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಜೊತೆ ಮಾತನಾಡಿದ್ದೇವೆ. ಆದಷ್ಟು ಬೇಗ ಲಸಿಕೆ ಪೂರೈಕೆ ಮಾಡುವುದಾಗಿ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧ ಮಾರಾಟ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅಲ್ಲೊಂದು ಇಲ್ಲೊಂದು ಮಾರಾಟ ಪ್ರಕರಣ ಕಂಡುಬರುತ್ತಿದೆ. ಕಾಳಸಂತೆಯಲ್ಲಿ ಔಷಧ ಮಾರುವವರ ವಿರುದ್ಧ ಕ್ರಮ ನಿಶ್ಚಿತ ಎಂದು ಹೇಳಿದರು.

2ನೇ ಅಲೆಯಲ್ಲಿ ನಿರೀಕ್ಷೆಗೂ ಮೀರಿ ಕೊವಿಡ್ ಪ್ರಕರಣ ಹೆಚ್ಚಳವಾಗಿದೆ. ಈಗ ಕೊರೊನಾ ಕೇಸ್ ಕಡಿಮೆಯಾಗಿರುವುದು ನೆಮ್ಮದಿ ವಿಚಾರ. ಕೊರೊನಾ ಕಡಿಮೆಯಾಯಿತು ಎಂದು ಸುಮ್ಮನಿರುವಂತಿಲ್ಲ. ಹಳ್ಳಿಗಳಲ್ಲಿ ಹೆಚ್ಚು ಕೊವಿಡ್ ಟೆಸ್ಟ್ ಮಾಡಬೇಕು. ಕೆಲವೊಂದು ಹಳ್ಳಿಗಳಲ್ಲಿ ಒಂದೇ ಒಂದು ಕೇಸ್ ಪತ್ತೆಯಾಗಿಲ್ಲ. ಅಂತಹ ಹಳ್ಳಿಗಳಿಗೆ ಕೊರೊನಾ ಹರಡದಂತೆ ನಿಗಾವಹಿಸಬೇಕು ಎಂದು ಜಿಲ್ಲಾಡಳಿತಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರು.

RELATED TOPICS:
English summary :There were few ventilators that needed some repair. We have rectified everything and we will make use of the ventilators at the earliest: Karnataka CM BS Yediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...