ಮಾಜಿ ಸಿಎಂ ಸಿದ್ದರಾಮಯ್ಯಗೆ ತೀವ್ರ ಜ್ವರ ಹಿನ್ನಲೆ, ಆಸ್ಪತ್ರೆಗೆ ದಾಖಲು! | ಜನತಾ ನ್ಯೂಸ್
ಬೆಂಗಳೂರು : ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ನಿನ್ನೆಯಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ನಿಗದಿಯಾಗಿದ್ದಂತ ಎಲ್ಲಾ ಕಾರ್ಯಕ್ರಮಗಳನ್ನು ವೈದ್ಯರ ಸೂಚನೆಯ ಮೇರೆಗೆ ರದ್ದು ಪಡಿಸಲಾಗಿತ್ತು.
ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ತಪಾಸಣೆಗೆ ಒಳಪಡುತ್ತಿದ್ದಾರೆ. ಅಗತ್ಯ ಬಿದ್ದರೆ ವೈದ್ಯರ ಸಲಹೆ ಆಧರಿಸಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.
ಸಿದ್ದರಾಮಯ್ಯ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದರೂ ಕೂಡ ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.
ಕೊರೊನಾ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ವರ್ಷ ಆಗಸ್ಟ್ನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವಾರದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸೋಂಕಿನಿಂದ ಗುಣಮಖರಾದ ಬಳಿಕ, ಕೊವಿಡ್ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ನಂತರ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್ ಆಗಿದ್ದರು.
ಸಿದ್ದರಾಮಯ್ಯ ಮಾರ್ಚ್ನಲ್ಲಿ ಕೊರೊನಾ ಲಸಿಕೆಯನ್ನೂ ಪಡೆದುಕೊಂಡಿದ್ದಾರೆ.