ಚೆಕ್ಪೋಸ್ಟ್ ಬಳಿ ಅಮಾಯಕರಿಗೆ ಕಿರುಕುಳ, ಹಣ ವಸೂಲಿ, ಪಿಎಸ್ಐ ಅಮಾನತು | ಜನತಾ ನ್ಯೂಸ್
ಕೋಲಾರ : ಲಾಕ್ಡೌನ್ ವೇಳೆ ಹಣಕ್ಕಾಗಿ ಜನರಿಗೆ ಕಿರುಕುಳ ನೀಡುತ್ತಿದ್ದ ಆರೋಪದಡಿ ಕೋಲಾರದಲ್ಲಿ ಪಿಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ.
ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ಗೆ ಸ್ಥಳೀಯರಿಂದ ಪಿಎಸ್ಐ ನರಸಿಂಹ ಮೂರ್ತಿ ಅವರು ಸಾರ್ವಜನಿಕರಿಗೆ ಅನತ್ಯವಾಗಿ ಕಿರುಕುಳ ನೀಡಿ ಜನರಿಂದ ಹಣ ವಸೂಲಿ ಮಾಡುತಿದ್ದಾರೆ ಎಂಬ ದೂರು ಬಂದ ಹಿನ್ನೆಲೆ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದರು.
ಅಲ್ಲದೆ ಪಿಎಸ್ಐ ನರಸಿಂಹಮೂರ್ತಿ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ಜೂಜು ಅಡ್ಡೆಗಳಿಗೂ ಕುಮ್ಮಕ್ಕು ನೀಡಿ ಹಣ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ. ಹೀಗಾಗಿ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಕೂಡಲೇ ಪಿಎಸ್ಐ ನರಸಿಂಹಮೂರ್ತಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.